Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:15 - ಕನ್ನಡ ಸತ್ಯವೇದವು J.V. (BSI)

15 ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರಿಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವಾಸ್ತ್ಯಕ್ಕೂ ಅವನವನ ದೇಶಕ್ಕೂ ಪುನಃ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೋಡಿರಿ, ನಾನು ಅವರನ್ನು ಕಿತ್ತುಹಾಕಿದ ಮೇಲೆ ತಿರುಗಿ ಅವರ ಮೇಲೆ ಕನಿಕರಪಟ್ಟು ಪ್ರತಿಯೊಬ್ಬನನ್ನೂ ಅವನವನ ಸ್ವತ್ತಿಗೂ, ಅವನವನ ದೇಶಕ್ಕೂ ಪುನಃ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:15
16 ತಿಳಿವುಗಳ ಹೋಲಿಕೆ  

ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ. ಎದೋಮ್ಯರನ್ನು ಕುರಿತದ್ದು.


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ಆದರೂ ಕಟ್ಟಕಡೆಯಲ್ಲಿ ಏಲಾವಿುನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.


ನಾನು ನನ್ನ ಜನರಾದ ಇಸ್ರಾಯೇಲ್ಯರ ದುರವಸ್ಥೆಯನ್ನು ತಪ್ಪಿಸುವೆನು; ಅವರು ಹಾಳುಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು; ದ್ರಾಕ್ಷೆಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು; ಫಲವೃಕ್ಷಗಳನ್ನು ಬೆಳೆಯಿಸಿ ಅವುಗಳ ಹಣ್ಣುಗಳನ್ನು ತಿನ್ನುವರು.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವಾಸ್ತ್ಯಕ್ಕೆ ತಿರಿಗಿ ಬರಬಹುದು ಎಂದು ಆಜ್ಞಾಪಿಸಿದೆನು.


ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ತಿರಿಗಿ ಬರುವದಿಲ್ಲ.


ಇದಾದ ಮೇಲೆ ನಾನು ಹಿಂತಿರುಗಿ ಬಂದು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತುವೆನು. ಅದರಲ್ಲಿ ಹಾಳಾದದ್ದನ್ನು ನಾನು ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇವಿುಗೆ ಸಕಲ ಜನಾಂಗಗಳವರು ನೆರೆದುಬರುವರು; ಇನ್ನು ಮೇಲೆ ತಮ್ಮ ದುಷ್ಟಹೃದಯದ ಹಟದಂತೆ ನಡೆಯರು.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯವು ಒಡೆದು ನಾಲ್ಕು ದಿಕ್ಕುಗಳಿಗೂ [ನಾಲ್ಕು] ಪಾಲಾಗುವದು; ಅದು ಅವನ ಸಂತತಿಗೆ ಭಾಗವಾಗದು, ಅವನ ಆಳಿಕೆಯಲ್ಲಿ ಪ್ರಬಲವಾಗಿದ್ದಂತೆ ಇನ್ನು ಪ್ರಬಲವಾಗದು; ಆ ರಾಜ್ಯವು ಕೀಳಲ್ಪಟ್ಟು ನಾಲ್ವರಿಗೆ ಮಾತ್ರವಲ್ಲದೆ ಇತರರಿಗೂ ಪಾಲಾಗುವದು.


ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು