Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:2 - ಕನ್ನಡ ಸತ್ಯವೇದವು J.V. (BSI)

2 ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:2
15 ತಿಳಿವುಗಳ ಹೋಲಿಕೆ  

ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.


ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಯೆಹೋವನ ಈ ವಾಕ್ಯವನ್ನು ಕೇಳು - ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ಅದಕ್ಕೆ ಆತನು - ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ; ಅವನು ಬರೆದದ್ದೇನಂದರೆ - ಈ ಜನರು ಮಾತಿನಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಮನಸ್ಸು ನನಗೆ ದೂರವಾಗಿದೆ.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ಮೂರ್ಖನು ಬೇರೂರುವದನ್ನು ನಾನು ನೋಡಿದೆನು; ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವದಕ್ಕೆ ಆಸ್ಪದವಾಯಿತು.


ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸುರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವದನ್ನು ನೋಡಿದ್ದೆನು.


ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?


ತುಂಬಿದ ಪಟ್ಟಣದಲ್ಲಿ ನರಳುವರು, ಗಾಯಪಟ್ಟವರು ಮೊರೆಯಿಡುವರು. ದೇವರಾದರೋ ಅದನ್ನು ಅಯುಕ್ತವೆಂದೆಣಿಸುವದಿಲ್ಲ.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು