Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:25 - ಕನ್ನಡ ಸತ್ಯವೇದವು J.V. (BSI)

25 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:25
22 ತಿಳಿವುಗಳ ಹೋಲಿಕೆ  

ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ ದೇವರು ನೇವಿುಸಿರುವ ಸ್ವಾಸ್ತ್ಯವೂ ಇವೇ.


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ಆತನು ದುಷ್ಟರ ಮೇಲೆ ಪಾಶಗಳನ್ನು ಸುರಿಸಲಿ. ಬೆಂಕಿ ಗಂಧಕ ಉರಿಗಾಳಿ ಇವುಗಳನ್ನು ಅವರ ಪಾನವಾಗಮಾಡಲಿ.


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ನೀವು ನಿಮ್ಮೊಳಗೆ - ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಅಸತ್ಯವನ್ನು ಆಶ್ರಯಿಸಿಕೊಂಡು ಮೋಸವನ್ನು ಮರೆ ಹೊಕ್ಕಿದ್ದೇವಲ್ಲಾ ಅಂದುಕೊಂಡದರಿಂದ


ಆ ದಿನದಲ್ಲಿ ಯಾಕೋಬಿನ ಮಾಂಸದ ಕೊಬ್ಬು ಕರಗಿ ಅದರ ಮಹಿಮೆಯು ಕ್ಷೀಣವಾಗುವದು.


ಅವರು ಸತ್ಯದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿಕರ್ತನನ್ನು ಪೂಜಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವಿಸುವವರಾದರು. ಸೃಷ್ಟಿಕರ್ತನೊಬ್ಬನೇ ನಿರಂತರ ಸ್ತುತಿಹೊಂದತಕ್ಕವನು. ಆಮೆನ್.


ಆತನೇ ಇವುಗಳಿಗೆ ಪಾಲುಮಾಡಿಕೊಟ್ಟಿದ್ದಾನೆ, ಆತನ ಕೈಯೇ ನೂಲುಹಾಕಿ ದೇಶವನ್ನು ಹಂಚಿದೆ; ಅದು ಇವುಗಳಿಗೆ ನಿತ್ಯಸ್ವಾಸ್ತ್ಯವಾಗುವದು, ಅವು ತಲತಲಾಂತರಕ್ಕೂ ಅಲ್ಲಿ ವಾಸಿಸುವವು.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕುದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತು ಬಿಟ್ಟಿದ್ದೇವೆಂದು ಇಸ್ರಾಯೇಲ್ಯರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.


ಅದು ದೈವೋಕ್ತಿಗೆ ಕಿವಿಗೊಡಲಿಲ್ಲ, ಶಿಕ್ಷಣೆಗೆ ಒಳಪಡಲಿಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು