Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:15 - ಕನ್ನಡ ಸತ್ಯವೇದವು J.V. (BSI)

15 ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು - ಖಡ್ಗದಿಂದಲೂ ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:15
26 ತಿಳಿವುಗಳ ಹೋಲಿಕೆ  

ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು.


ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ನೀನು ಅಡಗಿಕೊಳ್ಳುವದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವದು ಎಂದು ಉತ್ತರ ಕೊಟ್ಟನು.


ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.


ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.


ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ ಹಲ್ಲುಗಳಿಗೆ ಕುರುಕುವದೇನಾದರೂ ಸಿಕ್ಕಿರುವ ತನಕ ಶುಭವನ್ನು ಪ್ರಕಟಿಸುವವರೂ ತಮ್ಮ ಬಾಯಿಗೆ ಕವಳಕೊಡದವನ ಮೇಲೆ ಯುದ್ಧನಿರ್ಧರಿಸುವವರೂ ಆಗಿರುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ -


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ನಾನು ಇವರನ್ನು ನಿರ್ಮೂಲಮಾಡಿ ಕೊಚ್ಚಿಬಿಡುವೆನು; ದ್ರಾಕ್ಷೆಯ ಬಳ್ಳಿಯಲ್ಲಿಯೂ ಅಂಜೂರದ ಮರದಲ್ಲಿಯೂ ಹಣ್ಣಿರುವದಿಲ್ಲ, ಎಲೆಯು ಬಾಡುವದು; ನಾನು ಹಾಳು ಮಾಡುವವರನ್ನು ಅವರಿಗೆ ನೇವಿುಸುವೆನು. ಇದು ಯೆಹೋವನ ನುಡಿ.


ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು -


ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ ಸ್ವಜನರನ್ನು ಎಚ್ಚರಿಸದೆ ಇರುವಲ್ಲಿ ಖಡ್ಗವು ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಹೊಣೆಯಾದ ಕಾವಲುಗಾರನಿಗೆ ಮುಯ್ಯಿತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು