Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:19 - ಕನ್ನಡ ಸತ್ಯವೇದವು J.V. (BSI)

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:19
26 ತಿಳಿವುಗಳ ಹೋಲಿಕೆ  

ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು.


ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಯೆಹೋವನಾದ ನಾನು ಇವರನ್ನು ನೂಕಿಬಿಟ್ಟದ್ದರಿಂದ ಕಂದುಬೆಳ್ಳಿಯೆನಿಸಿಕೊಳ್ಳುವರು ಎಂದು ಹೇಳಿದ್ದಾನೆ.


ನಿನ್ನ ಭಾಗಕ್ಕೆ ಯಾರೂ ಇಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ, ನಿನಗೆ ವಾಸಿಯಾಗದು.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]


ನನ್ನ ಸ್ವಾಸ್ತ್ಯವಾದ ಜನವು ನನ್ನ ಪಾಲಿಗೆ ಅರಣ್ಯದಲ್ಲಿರುವ ಸಿಂಹದಂತಿದೆ; ಅದು ನನ್ನ ಮೇಲೆ ಗರ್ಜಿಸಿದೆ; ಆದಕಾರಣ ಅದನ್ನು ಹಗೆಮಾಡಿದ್ದೇನೆ.


ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲ್ಯರನ್ನು ಅಸಹ್ಯದಿಂದ ನಿರಾಕರಿಸಿಬಿಟ್ಟನು.


ನಾನು ಒಳ್ಳೇದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರುನೋಡುತ್ತಿರುವಾಗ ಕತ್ತಲಾಯಿತು.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಯೆರೂಸಲೇಮ್ ಯುವತಿಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಉದಾಹರಣೆಯನ್ನು ಎಲ್ಲಿ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


[ಯೆರೂಸಲೇಮೇ,] ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಟುಬಿಟ್ಟು ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ರೇಗಿದವನಾಗಿ ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವಾಸ್ತ್ಯವನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ಕೇಡು ಯೆಹೋವನಿಂದಿಳಿದು ಯೆರೂಸಲೇವಿುನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವದಿಲ್ಲವೋ ಎಂದು ವೇದನೆಪಡುತ್ತಾರೆ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಗಾಯವು ಗುಣಹೊಂದದು, ನಿನ್ನ ಬಾಸುಂಡೆಯು ಘೋರವಾಗಿದೆ.


ಇಸ್ರಾಯೇಲ್ಯರ ಸದಮಲಸ್ವಾವಿುಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.


ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು