Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:5 - ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಬಡುಕೊಳ್ಳುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:5
15 ತಿಳಿವುಗಳ ಹೋಲಿಕೆ  

ಸಹತಾಪದಿಂದ ನಿನಗಾಗಿ ಬಡುಕೊಳ್ಳುವವರು ಯಾರಿದ್ದಾರೆ? ನಿನಗೆ ಈ ಎರಡು ಬಾಧೆಗಳು ಬಂದಿವೆ, [ನಿನ್ನ ದೇಶವು] ಹಾಳುಪಾಳಾಗಿದೆ, [ನಿನ್ನ ಪ್ರಜೆಗೆ] ಕ್ಷಾಮವೂ ಖಡ್ಗವೂ ಪ್ರಾಪ್ತವಾಗಿವೆ; ನಾನು ನಿನ್ನನ್ನು ಹೇಗೆ ಸಂತೈಸಲಿ?


ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ - ನಿನೆವೆಯೂ ಹಾಳಾಯಿತಲ್ಲಾ, ಯಾರು ಗೋಳಾಡಾರು, ನಿನ್ನನ್ನು ಸಂತೈಸತಕ್ಕವರು ನನಗೆ ಎಲ್ಲಿ ಸಿಕ್ಕಾರು ಅಂದುಕೊಳ್ಳುವನು.


ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ವ್ಯಾಧಿಖಡ್ಗಕ್ಷಾಮಗಳಿಂದ ಹತಶೇಷರಾದ ಪ್ರಜೆಗಳನ್ನೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಕೊಟ್ಟುಬಿಡುವೆನು; ಅವನು ಅವರನ್ನು ಕರುಣಿಸದೆ ಕನಿಕರಪಡದೆ ಉಳಿಸದೆ ಕತ್ತಿಯಿಂದ ಸಂಹರಿಸುವನು.


ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ಯೆಹೋವನು [ನನಗೆ] ಹೀಗೆ ಹೇಳಿದ್ದಾನೆ - ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡುಕೊಳ್ಳಲೂಬೇಡ; ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ.


ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ಹತ್ತು ಮಂದಿ ಸೇವಕರನ್ನು ಕರೆದು ಅವರಿಗೆ - ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮ ಸಮಾಚಾರವನ್ನು ವಿಚಾರಿಸಿ ಅವನಿಗೆ ನನ್ನ ಹೆಸರಿನಲ್ಲಿ -


ದಾವೀದನು ತಾನು ತಂದವುಗಳನ್ನು ಸಾಮಾನುಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.


ಈ ವಿಷಯದಲ್ಲಿ ಏನು ಮಾಡಬೇಕೆಂಬದನ್ನು ಆಲೋಚಿಸಿರಿ ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸಹತ್ತಿದರು.


ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.


ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು