Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:4 - ಕನ್ನಡ ಸತ್ಯವೇದವು J.V. (BSI)

4 ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:4
33 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣಿಡರು, ಭೂವಿುಯ ಮೇಲೆ ಗೊಬ್ಬರವಾಗುವರು.


ಅವರು ಎಂದೋರಿನಲ್ಲಿ ವಧಿಸಲ್ಪಟ್ಟು ಹೊಲದ ಗೊಬ್ಬರವಾಗಿಹೋದರಲ್ಲಾ.


ಯೆಹೋವನ ಈ ಮಾತನ್ನು ಸಾರು ಎಂದು ನನಗೆ ಅಪ್ಪಣೆಯಾಯಿತು - ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವವು; ಅವು ಹೊಲಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವವು.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು.


ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.


ಕಡಿಯಲ್ಪಟ್ಟವರ ಶವಗಳೆಲ್ಲಾ ಬೆಟ್ಟದ ಹದ್ದುಗಳಿಗೂ ಕಾಡುಮೃಗಗಳಿಗೂ ಪಾಲಾಗಿ ಬಿದ್ದಿರುವವು, ಬೇಸಿಗೆಯಲ್ಲಿ ಹದ್ದುಗಳಿಗೂ ಹಿಮಗಾಲದಲ್ಲಿ ಕಾಡುಮೃಗಗಳಿಗೂ ಜೀವನವಾಗುವವು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಇಗೋ, ಇವರಿಗೆ ಮೇಲನ್ನಲ್ಲ, ಕೇಡನ್ನೇ ಮಾಡಬೇಕೆಂದು ಎಚ್ಚರಗೊಂಡಿದ್ದೇನೆ; ಐಗುಪ್ತದಲ್ಲಿನ ಎಲ್ಲಾ ಯೆಹೂದ್ಯರು ಖಡ್ಗಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ರಾತ್ರಿಯ ಚಳಿಗೂ ಈಡಾಗುವದು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ - ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗವ್ಯಾಧಿಕ್ಷಾಮಗಳಿಗೆ ಗುರಿಯಾಗುವಂತೆ ಬಿಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.


ಈಜೆಬೆಲಳ ಶವವು ಸಮಾಧಿಯನ್ನು ಸೇರುವದಿಲ್ಲ; ನಾಯಿಗಳು ಅದನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು ಅನ್ನುತ್ತಾನೆ ಎಂದು ಹೇಳಿ ಕದತೆರೆದು ಓಡಿಹೋದನು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು.


ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಆತನು ನಿಮ್ಮನ್ನು ಕ್ಷಯರೋಗ ಚಳಿಜ್ವರ ಉರಿತ ಉಷ್ಣಜ್ವರಗಳಿಂದಲೂ ದೇಶವನ್ನು ಕ್ಷಾಮದಿಂದಲೂ ಬೆಳೆಯನ್ನು ಕಾಡಿಗೆ ಬಿಸಿಗಾಳಿಗಳಿಂದಲೂ ಬಾಧಿಸಲಾಗಿ ನೀವು ಸಾಯುವ ತನಕ ಇವು ನಿಮ್ಮನ್ನು ಬೆನ್ಹತ್ತುವವು.


ಈ ಪಟ್ಟಣದಲ್ಲಿ ವಾಸಿಸುವ ಮನುಷ್ಯರನ್ನೂ ಪಶುಗಳನ್ನೂ ಬಾಧಿಸುವೆನು; ಘೋರವ್ಯಾಧಿಯು ಸಾಯಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು