Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:3 - ಕನ್ನಡ ಸತ್ಯವೇದವು J.V. (BSI)

3 ಬೈಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತಗಳಲ್ಲಿ ನೀವು ಮಾಡಿದ ಪಾಪದ ನಿವಿುತ್ತ ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನೂ ಪೂಜಾಸ್ಥಳಗಳನ್ನೂ ಸೂರೆಗೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:3
23 ತಿಳಿವುಗಳ ಹೋಲಿಕೆ  

ನಿನ್ನ ಸಕಲ ಪ್ರಾಂತ್ಯಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿವಿುತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡುಮಾಡಿ


ಮೀಕಾಯನು ಯೆಹೂದ್ಯರೆಲ್ಲರಿಗೆ - ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು ಎಂದು ಹೇಳಲಾಗಿ


ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ದಿಬ್ಬವನ್ನು ಕೆಡವಿ ನಿನ್ನ ಜಗಲಿಗಳನ್ನು ಒಡೆದು ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆ ತಗ್ಗುಗಳಿಗೂ ಹೀಗೆ ಹೇಳುತ್ತಾನೆ - ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ವಿರೋಧಿಯು ಕೈಚಾಚಿ ಅವಳ ಭೋಗ್ಯ ವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; ಮ್ಲೇಚ್ಫರು ನಿನ್ನ ಸಭೆಗೆ ಸೇರಬಾರದು ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವದನ್ನು ಆಕೆಯು ಕಾಣಬೇಕಾಯಿತು.


ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ಮತ್ತು ಈ ಪಟ್ಟಣದ ಎಲ್ಲಾ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಯೆಹೂದದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಅವರ ಶತ್ರುಗಳ ಕೈವಶಮಾಡುವೆನು; ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬೆಲಿಗೆ ತೆಗೆದುಕೊಂಡು ಹೋಗುವರು.


ಅವರ ಆಸ್ತಿಯು ಸೂರೆಯಾಗುವದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.


ಆಹಾ, ತಗ್ಗಿನ ನಗರಿಯೇ, ಪ್ರಸ್ಥಭೂವಿುಯ ಶಿಖರದ ಮೇಲಣ ಪುರಿಯೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಯಾರು ಇಳಿದು ನಮ್ಮ ಮೇಲೆ ಬಂದಾರು, ನಮ್ಮ ನಿವಾಸಗಳಲ್ಲಿ ಯಾರು ನುಗ್ಗಿಯಾರು ಎನ್ನುವವರೇ,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಕೂಡಿಸಿ ಇವರನ್ನು ಸೂರೆಗೆ ಸಿಕ್ಕಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು