Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:8 - ಕನ್ನಡ ಸತ್ಯವೇದವು J.V. (BSI)

8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:8
12 ತಿಳಿವುಗಳ ಹೋಲಿಕೆ  

ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡಿಸುತ್ತಾ ಮರುಭೂವಿುಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ ನಿಮ್ಮ ಎಲುಬುಗಳನ್ನು ಸಸಾರಮಾಡುವನು; ನೀವು ತಂಪಾದ ತೋಟಕ್ಕೂ ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ.


ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.


ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು ತೋಟದಲ್ಲೆಲ್ಲಾ ಕವಲೊಡೆದು ಹರಡಿ


ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವದು.


ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳಕೊಂಡು ಹೋಗುವಿ; ಇದು ಯೆಹೋವನ ನುಡಿ.


ಆಹಾ, ತಿಲಕವೋ ದೇವದಾರುವೋ ಒಂದು ವೃಕ್ಷವು ಲೆಬನೋನಿನಲ್ಲಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ, ಅದರ ಎತ್ತರವು ಬಹಳ, ಅದರ ತುದಿಯು ಮೇಘಚುಂಬಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು