Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:16 - ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಯೆಹೂದ್ಯರ ದೇಶವು ಬರಿದಾದ ಮರುಭೂಮಿಯಾಗುವುದು. ಜನರು ಇಲ್ಲಿಂದ ಹಾದುಹೋಗುವಾಗಲೆಲ್ಲಾ ಸಿಳ್ಳುಹಾಕಿ ತಲೆಯಾಡಿಸುವರು. ದೇಶವು ಹಾಳಾದುದನ್ನು ನೋಡಿ ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:16
35 ತಿಳಿವುಗಳ ಹೋಲಿಕೆ  

ನನ್ನನ್ನು ನೋಡುವವರೆಲ್ಲರೂ ಹಾಸ್ಯಮಾಡುತ್ತಾರೆ; ಅವರು ಓರೇ ತುಟಿಮಾಡಿ ತಲೆ ಆಡಿಸುತ್ತಾ -


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಬಂಧಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಅಲ್ಲಿ ಹಾದುಹೋಗುವವರು ತಲೇ ಆಡಿಸಿ -


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವದು; ಬಾಬೆಲನ್ನು ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಅಬ್ಬಬ್ಬಾ, ಇದೇನು! ಯೆಹೋವನು ಈ ದೇಶವನ್ನೂ ಈ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.


ಅಲ್ಲಿ ಹಾದುಹೋಗುವವರು ತಲೇ ಆಡಿಸಿ ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ,


ಕನ್ನಿಕೆಯಾಗಿರುವ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ; ಯೆರೂಸಲೇಮ್ ಕುಮಾರ್ತೆಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ಈ ದೇಶದಲ್ಲಿರುವ ಜನರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇವಿುನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ - ಅವರು ಅನ್ನವನ್ನು ಬೆದರಿನಿಂದ ತಿಂದು ನೀರನ್ನು ಬೆರಗಿನಿಂದ ಕುಡಿಯುವರು; ಏಕಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ ದೇಶವು ಬರಿದಾಗುವದು.


ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಾನು ಯೆರೂಸಲೇಮನ್ನು ಹಾಳುದಿಬ್ಬಗಳನ್ನಾಗಿಯೂ ನರಿಗಳ ಹಕ್ಕೆಯನ್ನಾಗಿಯೂ ಗೈದು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂವಿುಯನ್ನಾಗಿ ಮಾಡುವೆನು [ಎಂದು ಯೆಹೋವನು ಹೇಳಿದ್ದಾನಲ್ಲಾ].


ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದ ಮಾಡಿದ್ದೀ; ಅವರು ನಮ್ಮನ್ನು ನೋಡಿ ತಲೆ ಆಡಿಸುತ್ತಾರೆ.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಆತನು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುವಿಶೇಷವಾದ ಉಪದ್ರವಗಳನ್ನು ಬರಮಾಡುವನು. ಬಹುಕಾಲದವರೆಗೂ ವಾಸಿಯಾಗದ ಘೋರ ವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವನು.


ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಹೊಂದುವದು. ಅವರು ಯೆಹೋವನ ಆಜ್ಞೆಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವದು.


ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ಒಕ್ಕಲಾಗುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.


ನಾನು ಜನಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.


ಐಗುಪ್ತಕ್ಕೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಯೆಹೂದಜನಶೇಷವನ್ನು ನಾನು ಹಿಡಿದು ನಾಶಮಾಡುವೆನು; ಐಗುಪ್ತದಲ್ಲೇ ಒರಗಿ ಹೋಗುವರು; ಖಡ್ಗಕ್ಷಾಮಗಳಿಂದ ನಾಶವಾಗುವರು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಖಡ್ಗಕ್ಷಾಮಗಳಿಂದ ಸತ್ತು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವರು.


ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.


ಎದೋಮು ಬೆರಗಿಗೆ ಆಸ್ಪದವಾಗುವದು; ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದೀರಲ್ಲಾ! ಹರಟೆಗಾರರ ಬಾಯಿಗೆ ಬಿದ್ದು ಜನರ ದೂಷಣೆಗೆ ಗುರಿಯಾಗಿದ್ದೀರಲ್ಲಾ!


ಆದದರಿಂದ ಯೆಹೋವನು ಯೆಹೂದದೇಶದ ಮೇಲೆಯೂ ಯೆರೂಸಲೇವಿುನ ಮೇಲೆಯೂ ಕೋಪವುಳ್ಳವನಾಗಿ ಅವುಗಳನ್ನು ಭಯವಿಸ್ಮಯ ಪರಿಹಾಸಗಳಿಗೆ ಆಸ್ಪದಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ನಾನು ಖಡ್ಗಕ್ಷಾಮವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಬೆರಗಿನ ಸಿಳ್ಳು, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.


ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ, ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದುಹೋಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು