Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 18:18 - ಕನ್ನಡ ಸತ್ಯವೇದವು J.V. (BSI)

18 ಆಗ ಅವರು - ಯೆರೆಮೀಯನಿಗೆ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದಷ್ಟೆ. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 18:18
37 ತಿಳಿವುಗಳ ಹೋಲಿಕೆ  

ಮೋಸಗಾರನೇ, ನಿನ್ನ ನಾಲಿಗೆಯು ಹದವಾದ ಕ್ಷೌರಕತ್ತಿಯಂತೆ ಅಪಾಯಗಳನ್ನೇ ಕಲ್ಪಿಸುತ್ತದೆ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಈಗ ನೀನು ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಈ ಮಾತನ್ನು ಹೇಳು - ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ನಿಮಗೆ ವಿರುದ್ಧವಾಗಿ ಯೋಚಿಸಿ ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಅವರು ತಂತ್ರೋಪಾಯಗಳನ್ನು ಕಲ್ಪಿಸಿ ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವದಿಲ್ಲ.


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;


ಜೀವನಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು.


ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿ


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ಕಳ್ಳನ ಸಲಕರಣೆಗಳು ಕೆಟ್ಟವುಗಳೇ; ದೀನದರಿದ್ರರು ನ್ಯಾಯವಾದಿಗಳಾಗಿದ್ದರೂ ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.


ಇದನ್ನು ಆತನ ಸಂಗಡ ಇದ್ದ ಫರಿಸಾಯರು ಕೇಳಿ - ನಾವೂ ಕುರುಡರೇನು? ಎಂದು ಕೇಳಿದಾಗ


ಯಾಜಕರೂ ಪ್ರವಾದಿಗಳೂ ಇವನು ಮರಣ ದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರಷ್ಟೆ ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.


ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಆತನಿಗೆ - ಬೋಧಕನೇ, ಈ ಮಾತುಗಳನ್ನು ಹೇಳುವದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು ಎಂದು ಹೇಳಲು


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಹೀಗಿರಲು ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ ಎಂದು ನೀವು ಅಂದುಕೊಳ್ಳುವದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳನ್ನಾಗಿ ಮಾಡಿದೆ.


ಯೆಹೋವನೇ, ನನ್ನ ಕಡೆಗೆ ಕಿವಿಗೊಡು, ನನ್ನೊಡನೆ ವ್ಯಾಜ್ಯವಾಡುವವರ ಮಾತನ್ನು ಕೇಳು.


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಕೊಡುತ್ತಿದ್ದು ಪ್ರವಾದಿಯಾದ ಆ ಯೆರೆಮೀಯನನ್ನು ಹಿಡಿದು ನೀನು ಕಸ್ದೀಯರನ್ನು ಮರೆಹೊಗಲು ಹೋಗುತ್ತಿದ್ದೀ ಎಂದು ಹೇಳಿದನು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ, ಬರುವವು; ದಿವ್ಯದರ್ಶನವಾಯಿತೇ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವದು, ಹಿರಿಯರಲ್ಲಿ ಮಂತ್ರಾಲೋಚನೆಯು ಇಲ್ಲವಾಗುವದು.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.


ನನ್ನ ಹಾನಿಗಾಗಿ ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.


ನೀವು ಇಂಥವರಾದಕಾರಣ ನಿಮಗೆ ರಾತ್ರಿಯಾಗುವದು, ದಿವ್ಯದರ್ಶನವಾಗದು; ನಿಮಗೆ ಕತ್ತಲುಕವಿಯುವದು, ಕಣಿಹೇಳಲಾಗದು; ಸೂರ್ಯನು ಪ್ರವಾದಿಗಳಿಗೆ ಮುಣುಗುವನು, ಹಗಲು ಅವರಿಗೆ ಕಾರ್ಗತ್ತಲಾಗುವದು;


ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು