Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 19:11 - ಕನ್ನಡ ಸತ್ಯವೇದವು J.V. (BSI)

11 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನೂ ಪಟ್ಟಣವನ್ನೂ ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಕುಂಬಾರನು ಒಡೆದು ಸರಿಪಡಿಸಲಾಗದ ಮಣ್ಣಿನ ಪಾತ್ರೆಯಂತೆ ನಾನು ಈ ಜನವನ್ನು ಮತ್ತು ಪಟ್ಟಣವನ್ನು ಒಡೆದುಬಿಡುವೆನು; ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಶವಗಳನ್ನು ತೋಫೆತಿನಲ್ಲಿ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಹೇಳು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ಈ ಮಣ್ಣಿನ ಕೊಡವನ್ನು ಒಡೆದುಹಾಕಿದಂತೆ ನಾನು ಯೆಹೂದ ಜನಾಂಗವನ್ನು ಮತ್ತು ಜೆರುಸಲೇಮ್ ನಗರವನ್ನು ಒಡೆದುಹಾಕುವೆನು. ಈ ಕೊಡವನ್ನು ಪುನಃ ಜೋಡಿಸಲು ಸಾಧ್ಯವಿಲ್ಲ. ಯೆಹೂದ ಜನಾಂಗದ ಸ್ಥಿತಿಯೂ ಹೀಗೆಯೇ ಆಗುವುದು. ತೋಫೆತಿನಲ್ಲಿ ಸ್ಥಳವಿಲ್ಲದಂತಾಗುವವರೆಗೂ ಸತ್ತವರನ್ನು ಅಲ್ಲಿ ಹೂಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 19:11
13 ತಿಳಿವುಗಳ ಹೋಲಿಕೆ  

ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು.


ಉರಿಯಿಂದ ಕೆಂಡವನ್ನು ತೆಗೆಯುವದಕ್ಕಾಗಲಿ, ಬಾವಿಯಿಂದ ನೀರನ್ನು ಗೋಚುವದಕ್ಕಾಗಲಿ ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದುಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದು ಬಿಡುವನು.


ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾದ ಚೀಯೋನಿನ ಪ್ರಜೆಗಳು ಕುಂಬಾರನ ಕೈಕೆಲಸದ ಮಣ್ಣುಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.


ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವದು.


ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


ಆಹಾ, ಈ ಕಾರಣದಿಂದ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋವಿುನ ತಗ್ಗು ಎಂಬ ಹೆಸರುಗಳು ಹೋಗಿ ಕೊಲೆಯ ತಗ್ಗು ಎಂಬ ಹೆಸರಾಗುವ ಕಾಲ ಬರುವದು;


ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.


ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.


ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಹೀಗೆ ನಾಶಪಡಿಸಿ ಈ ಪಟ್ಟಣವನ್ನು ತೋಫೆತಿನ ಸ್ಥಿತಿಗೆ ತರುವೆನು;


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೇಟೀಸ್ ನದಿಯ ಮಧ್ಯದೊಳಗೆ ಹಾಕಿ


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು