Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:11 - ಕನ್ನಡ ಸತ್ಯವೇದವು J.V. (BSI)

11 ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:11
23 ತಿಳಿವುಗಳ ಹೋಲಿಕೆ  

ಲಯವಿಲ್ಲದ ದೇವರ ಮಹಿಮೆಯನ್ನು ಬಿಟ್ಟು ಅದಕ್ಕೆ ಬದಲಾಗಿ ಲಯವಾಗುವ ಮನುಷ್ಯ ಪಶು ಪಕ್ಷಿ ಸರ್ಪಾದಿಗಳ ಮೂರ್ತಿಯನ್ನು ಮಾಡಿಕೊಂಡರು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ, ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವು ಅವರಿಂದ ಹಾಳಾದವು.


ಮನುಷ್ಯಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.)


ಹೀಗೆ ಅವರು ತಮ್ಮ ದಿವ್ಯಮಹಿಮೆಯನ್ನು ಬಿಟ್ಟು ಹುಲ್ಲುತಿನ್ನುವ ಎತ್ತಿನ ಜಡಮೂರ್ತಿಯನ್ನು ಹಿಡಿದುಕೊಂಡರು.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ; ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತರಗಳಲ್ಲಿ ನಡೆಯುವೆವು.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ಯೆಹೋವನು ಹೀಗನ್ನುತ್ತಾನೆ, ನಿಮ್ಮ ಪಿತೃಗಳು ನನ್ನಲ್ಲಿ ಯಾವ ಅನ್ಯಾಯವನ್ನು ಕಂಡದರಿಂದ ವ್ಯರ್ಥಾಚಾರವನ್ನು ಅನುಸರಿಸಿ ತಾವೇ ವ್ಯರ್ಥರಾಗಿ ನನ್ನನ್ನು ಬಿಟ್ಟು ದೂರವಾದರು?


ಅವರ ವಿಗ್ರಹಗಳೋ ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.


ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.


ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,


ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.


ದೇವರ ಮಂಜೂಷವು ಶತ್ರುವಶವಾದದರಿಂದಲೂ ಮಾವನೂ ಗಂಡನೂ ಮೃತಿ ಹೊಂದಿದರಿಂದಲೂ - ಮಹಿಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.


ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ಮಾಡಿಕೊಂಡಿರಲ್ಲಾ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.


ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.


ಹೀಗಿರಲು ಯೆಹೋವನು ಹೀಗನ್ನುತ್ತಾನೆ - ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯ ಕಾರ್ಯವನ್ನು ಮಾಡಿದ್ದಾಳೆ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ಕೈಕೊಳ್ಳದೆ ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸದೆ ಆ ಜನಾಂಗಗಳಿಗಿಂತ ಹೆಚ್ಚು ದೊಂಬಿಮಾಡುವವರಾಗಿರುವದರಿಂದ [ಯೆರೂಸಲೇಮೇ,]


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ.


ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ - ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ವೆಬೂಬನನ್ನು ವಿಚಾರಿಸುವದಕ್ಕೆ ಹೋಗುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು