Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:25 - ಕನ್ನಡ ಸತ್ಯವೇದವು J.V. (BSI)

25 ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:25
27 ತಿಳಿವುಗಳ ಹೋಲಿಕೆ  

ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಅವರೋ - ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು ಎಂದು ಹೇಳುತ್ತಾರೆ.


ಇದೊಂದನ್ನು ಮಾಡು, ನೀನು ಕಂಡಕಡೆಯೆಲ್ಲ ತಿರುಗುತ್ತಾ ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ ನನ್ನ ಮಾತನ್ನು ಕೇಳದೆ ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹಮಾಡಿದ್ದೀ ಎಂಬದಕ್ಕೆ ಒಪ್ಪಿಕೋ.


ನಾವು ರಕ್ಷಣೆಯನ್ನು ಹೊಂದಿದವರಾದರೂ ಇನ್ನು ಎದುರುನೋಡುವವರಾಗಿದ್ದೇವೆ. ಎದುರುನೋಡುವ ಪದವಿ ಪ್ರತ್ಯಕ್ಷವಾಗಿದ್ದರೆ ಎದುರುನೋಡುವದೇಕೆ? ಪ್ರತ್ಯಕ್ಷವಾದದ್ದನ್ನು ಎದುರುನೋಡುವದುಂಟೇ?


ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.


ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.


ಇವು ನನಗೆ ಏಕೆ ಸಂಭವಿಸಿದವು ಎಂದು ನೀನು ಮನದೊಳಗೆ ಅಂದುಕೊಂಡರೆ ನಿನ್ನ ನೆರಿಗೆಯು ಕೀಳಲ್ಪಟ್ಟು ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವದು.


ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದದರಿಂದ ನೀನು ಸೋತುಹೋಗಲಿಲ್ಲ.


ಯಾಕೋಬನ ಮನೆತನದವರು ಮೂಡಣ ದೇಶಗಳ [ಮಂತ್ರತಂತ್ರಗಳಲ್ಲಿ] ಮಗ್ನರೂ ಫಿಲಿಷ್ಟಿಯರ ಹಾಗೆ ಕಣಿಹೇಳುವವರೂ ಅನ್ಯದೇಶಗಳವರ ಸಂಗಡ ಒಪ್ಪಂದಮಾಡುವವರೂ ಆಗಿರುವದರಿಂದ ಈ ನಿನ್ನ ಜನರನ್ನು ಕೈಬಿಟ್ಟಿದ್ದೀಯಷ್ಟೆ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ತಂದೆಯು ತನ್ನ ಆಳುಗಳಿಗೆ - ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನು ಇಡಿರಿ; ಕಾಲಿಗೆ ಜೋಡು ಮೆಡಿಸಿರಿ;


ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ನೀವು ಎಂಥಾ ದುರ್ವಂಶ! ಯೆಹೋವನ ಮಾತನ್ನು ನೋಡಿರಿ, ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ ಗಾಢಾಂಧಕಾರದ ಪ್ರದೇಶವಾಗಿಯೂ ಪರಿಣವಿುಸಿದ್ದೆನೋ? ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು ಎಂದು ನನ್ನ ಜನರು ಹೇಳುವದು ಹೇಗೆ.


ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.


[ಚೀಯೋನ್ ಯುವತಿಯೇ,] ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀವಿುನಲ್ಲಿ ಅರಚಿಕೋ! ನಿನ್ನ ವಿುಂಡರೆಲ್ಲಾ ಹಾಳಾಗಿ ಹೋದರಲ್ಲಾ.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,


ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.


ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.


ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;


ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.


ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು