Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:26 - ಕನ್ನಡ ಸತ್ಯವೇದವು J.V. (BSI)

26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವದು; ಮರಕ್ಕೆ, ನೀನು ನನ್ನ ತಂದೆ ಎಂತಲೂ ಕಲ್ಲಿಗೆ, ಹೆತ್ತ ತಾಯಿ ನೀನು ಎಂತಲೂ ಹೇಳುವ ಪ್ರಜೆಗಳು, ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಹೀಗೆನ್ನುತ್ತಾರೆ : “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಜನರ ಕೈಗೆ ಸಿಕ್ಕಿಬಿದ್ದಾಗ ಕಳ್ಳನಿಗೆ ನಾಚಿಕೆಯಾಗುತ್ತದೆ. ಅದೇ ರೀತಿಯಲ್ಲಿ ಇಸ್ರೇಲ್ ವಂಶವು ನಾಚಿಕೆಪಡುತ್ತದೆ. ರಾಜರು ಮತ್ತು ನಾಯಕರು ನಾಚಿಕೆಪಡುವರು. ಯಾಜಕರು ಮತ್ತು ಪ್ರವಾದಿಗಳು ನಾಚಿಕೆಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:26
18 ತಿಳಿವುಗಳ ಹೋಲಿಕೆ  

ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇವಿುನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲ್ಯರೂ ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ನೀವು ಇಷ್ಟಪಟ್ಟ ಏಲಾಮರಗಳ ನಿವಿುತ್ತ ನಾಚಿಕೆಗೊಳ್ಳುವಿರಿ, ಗೊತ್ತುಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.


ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.


ವಿಗ್ರಹಗಳಲ್ಲಿ ಹಿಗ್ಗುವ ಮೂರ್ತಿಪೂಜಕರೆಲ್ಲಾ ತಲೆಬೊಗ್ಗಿಸಲಿ; ದೇವರುಗಳಿರಾ, ನೀವೆಲ್ಲರು ಆತನಿಗೆ ಅಡ್ಡಬೀಳಿರಿ.


ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು.


ವಿಗ್ರಹಶರಣರೆಲ್ಲಾ ಆಶಾಭಂಗಪಡುವರು; ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ; ಅವರೆಲ್ಲರು ಕೂಡಿ ನಿಲ್ಲಲಿ, ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.


ಆ ಕಾಲದಲ್ಲಿ ಅರಸನ ಎದೆಯು ಕುಂದುವದು, ಅಧಿಪತಿಗಳ ಹೃದಯವು ಕುಗ್ಗುವದು, ಯಾಜಕರು ಸ್ತಬ್ಧರಾಗುವರು, ಪ್ರವಾದಿಗಳು ಬೆರಗಾಗುವರು ಎಂದು ಯೆಹೋವನು ಅನ್ನುತ್ತಾನೆ.


ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವದು; ನಿನ್ನ ವಿುಂಡರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿವಿುತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವದು ಖಂಡಿತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು