Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 2:27 - ಕನ್ನಡ ಸತ್ಯವೇದವು J.V. (BSI)

27 ನನ್ನ ಕಡೆಗೆ ಮುಖ ತಿರುಗಿಸದೆ ಬೆನ್ನುಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ - ಎದ್ದು ನಮ್ಮನ್ನುದ್ಧರಿಸು ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವರು ಮರದ ತುಂಡುಗಳೊಡನೆ ಮಾತನಾಡಿ, ‘ನೀನು ನಮ್ಮ ತಂದೆ’ ಎಂದು ಹೇಳುವರು. ಆ ಜನರು ಕಲ್ಲುಬಂಡೆಯೊಂದಿಗೆ ಮಾತನಾಡಿ, ‘ನೀನು ನಮಗೆ ಜನ್ಮಕೊಟ್ಟ ತಾಯಿ’ ಎಂದು ಹೇಳುವರು. ಆ ಜನರೆಲ್ಲರು ನಾಚಿಕೆಪಡುವರು. ಅವರು ನನ್ನ ಕಡೆಗೆ ನೋಡುವದಿಲ್ಲ. ಅವರು ನನಗೆ ವಿಮುಖರಾಗಿದ್ದಾರೆ. ಆದರೆ ಯೆಹೂದದ ಜನರು ಕಷ್ಟದಲ್ಲಿ ಸಿಕ್ಕಿಹಾಕಿಕೊಂಡಾಗ, ‘ಬಾ ನಮ್ಮನ್ನು ರಕ್ಷಿಸು’ ಎಂದು ನನ್ನನ್ನು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 2:27
23 ತಿಳಿವುಗಳ ಹೋಲಿಕೆ  

ಯೆಹೋವನೇ, [ನಿನ್ನ ಜನರು] ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಆಶ್ರಯಿಸಿದರು, ನಿನ್ನ ಶಿಕ್ಷೆಗೆ ಗುರಿಯಾಗಿ ಜಪಮಾಡಿದರು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲುಮಾಡುವೆನು. ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಅಡವಿಯಲ್ಲಿ ಪಳಗಿದ್ದು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿದ್ದೀ; ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯು ನೂಕಿಬಿಟ್ಟೀತು? ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.


ಕಲ್ಲು ಮರಗಳೊಡನೆ ಹಾದರಮಾಡಿ ಲಘುವೆಂದು ಭಾವಿಸಿಕೊಂಡ ತನ್ನ ಸೂಳೆತನದಿಂದ ದೇಶವನ್ನು ಅಪವಿತ್ರಪಡಿಸಿದಳು.


ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ, ಇವರ ಮೂಲಕ - ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ನಮ್ಮ ಪಿತೃಗಳು ನಮ್ಮ ದೇವರಾದ ಯೆಹೋವನಿಗೆ ದ್ರೋಹ ಮಾಡಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ಬಿಟ್ಟರು. ಅವರು ಆತನ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.


ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದು ಅವನಿಗೆ - ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು