Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:16 - ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಪ್ರಾತಃಕಾಲದಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಮುಂಜಾನೆಯಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ನಗರಗಳ ಗತಿಯು ಅವನಿಗೆ ಬರಲಿ. ಬೆಳಿಗ್ಗೆ ಯುದ್ಧದ ಕೂಗಾಟವೂ, ಮಧ್ಯಾಹ್ನದಲ್ಲಿ ಯುದ್ಧದ ಕಿರುಚಾಟವೂ ಅವನ ಕಿವಿಗೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:16
25 ತಿಳಿವುಗಳ ಹೋಲಿಕೆ  

ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ; ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.


ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿವಸದಲ್ಲಿ ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಕೋಟೆಗಳನ್ನೂ ದೊಡ್ಡ ಕೊತ್ತಲಗಳನ್ನೂ ಹಿಡಿಯಲು ಆರ್ಭಟಿಸಿ ಕೊಂಬೂದುವ ದಿನ.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ಯೋನನು ಪಟ್ಟಣದಲ್ಲಿ ಸೇರಿ ಮೊದಲು ಒಂದು ದಿವಸದ ಪ್ರಯಾಣದಷ್ಟು ದೂರ ನಡೆದು - ನಾಲ್ವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವದು ಎಂದು ಸಾರ ತೊಡಗಿದನು.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವದು; ಭಟರು ಘೋಷಿಸಿ ಕೊಂಬೂದುವ ಯುದ್ಧ ಕೋಲಾಹಲದಲ್ಲಿ ಮೋವಾಬು ಸಾಯುವದು.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತೇನೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತೂರಿಯ ಶಬ್ದವನ್ನೂ ಯುದ್ಧಘೋಷವನ್ನೂ ಕೇಳುತ್ತೀಯಲ್ಲಾ.


ಯೆರೂಸಲೇವಿುನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಮೋಸದಲ್ಲಿ ನಡೆದು ದುಷ್ಟರಲ್ಲಿ ಯಾವನೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ; ಅವರೆಲ್ಲರು ಸೊದೋವಿುನಂತೆ, ಆ ಪುರನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋವಿುನ ಪಾಪಕ್ಕಿಂತಲೂ ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು