Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 20:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದೆ, ನಿಜವಾಗಿಯೂ ನಾನು ಮರುಳಾದೆನು, ನೀನು ನನಗಿಂತ ಬಲಿಷ್ಠನಾದುದರಿಂದ ಗೆದ್ದೆ. ನಾನೊಂದು ತಮಾಷೆಯಾಗಿದ್ದೇನೆ. ಹಗಲೆಲ್ಲ ಜನರು ನನ್ನನ್ನು ಕಂಡು ನಗುತ್ತಾರೆ. ನನ್ನನ್ನು ಗೇಲಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 20:7
32 ತಿಳಿವುಗಳ ಹೋಲಿಕೆ  

ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ ಹಗಲೆಲ್ಲಾ ಅವರ ಗೇಲಿಯ ಹಾಡುಗಳಿಗೆ ಗುರಿಯಾಗಿದ್ದೇನೆ.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಅಥವಾ, ಕೈಕೆಲಸವನ್ನು ಮಾಡದೆ ಜೀವಿಸುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಹಕ್ಕಿಲ್ಲವೇನು?


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು.


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇವಿುಸಿ ಯಾವಯಾವನು ಮೈದುಂಬಿ ಪ್ರವಾದಿಯಾಗಿ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.


ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.


ಗರ್ವಿಷ್ಠರು ನನ್ನನ್ನು ಬಹಳವಾಗಿ ಹಾಸ್ಯಮಾಡಿದರು; ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ಈಗಲಾದರೋ ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು. ಮತ್ತು ಅವರ ಗಾದೆಗಳಿಗೆ ಆಸ್ಪದವಾಗಿದ್ದೇನೆ.


ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗಂದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು