Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 21:4 - ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಈ ಪಟ್ಟಣದೊಳಗೆ ಕೂಡಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 21:4
23 ತಿಳಿವುಗಳ ಹೋಲಿಕೆ  

ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪರೋಷಭರಿತನಾದ ನಾನೇ ಇವರನ್ನು ಹತಿಸುವೆನು.


ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಆಹಾ, ಬಹು ಜನಸಮೂಹವಿದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗಗಳ ಆರ್ಭಟ! ಸೇನಾಧೀಶ್ವರನಾದ ಯೆಹೋವನು ಸೈನ್ಯವನ್ನು ಯುದ್ಧಕ್ಕಾಗಿ ಅಣಿಮಾಡುತ್ತಿದ್ದಾನೆ.


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ನಾನು ಸಕಲ ಜನಾಂಗಗಳನ್ನು ಯೆರೂಸಲೇವಿುಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರವಿುಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು, ವಿುಕ್ಕವರೋ ಪಟ್ಟಣದಲ್ಲೇ ಉಳಿಯುವರು.


ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.


ನೇರ್ಗಲ್‍ಸರೆಚರ್, ಸಮ್ಗರ್‍ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್‍ಸರೆಚರ್, ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಏಕಂದರೆ ಯೆಹೋವನು - ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗೆ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ಅದನ್ನು ಕಣ್ಣಾರೆ ಕಾಣುವಿ; ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಆಗ ಯೆರೆಮೀಯನು ಈ ಉತ್ತರವನ್ನು ಚಿದ್ಕೀಯನಿಗೆ ತಿಳಿಸಿರಿ ಎಂದು ಅವರಿಗೆ ಹೇಳಿದನು -


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಇಗೋ, ಮುತ್ತಿಗೆಯ ದಿಬ್ಬಗಳು, ಪಟ್ಟಣವನ್ನು ಆಕ್ರವಿುಸುವದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗಕ್ಷಾಮವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದೀ.


ಇಗೋ, ನಾನು ಯೆಹೂದ್ಯರಿಗೂ ಯೆರೂಸಲೇವಿುನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾವಿುಯೂ ಇಸ್ರಾಯೇಲ್ಯರ ದೇವರೂ ಆದ ಯೆಹೋವನು ಅನ್ನುತ್ತಾನೆ.


ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ ಸುತ್ತುಮುತ್ತಲೂ ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿ ಬಿಟ್ಟಿದ್ದಾನೆ.


ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ ನಿನ್ನ ಎಡಗೈಯೊಳಗಿಂದ ಬಿಲ್ಲನ್ನು ಹೊಡೆದುಹಾಕಿ ನಿನ್ನ ಬಲಗೈಯೊಳಗಿಂದ ಬಾಣಗಳನ್ನು ಉದುರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು