Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 22:8 - ಕನ್ನಡ ಸತ್ಯವೇದವು J.V. (BSI)

8 ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ - ಯೆಹೋವನು ಈ ಮಹಾ ಪಟ್ಟಣಕ್ಕೆ ಹೀಗೆ ಏಕೆ ಮಾಡಿದ ಎಂದು ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು?’ ಎಂದು ಒಬ್ಬರನ್ನೊಬ್ಬರು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 22:8
13 ತಿಳಿವುಗಳ ಹೋಲಿಕೆ  

ಕರ್ತನೇ, ನೀನು ಧರ್ಮಸ್ವರೂಪ, ನಾವೋ ನಾಚಿಕೆಗೀಡಾದವರು; ಹೌದು, ಈಗಲೇ ಯೆಹೂದ್ಯರೂ ಯೆರೂಸಲೇವಿುನ ನಿವಾಸಿಗಳೂ ನಿನಗೆ ವಿರುದ್ಧವಾಗಿ ಮಾಡಿದ ದ್ರೋಹದ ನಿವಿುತ್ತ ನಿನ್ನಿಂದ ದೇಶದೇಶಗಳಿಗೆ ತಳ್ಳಲ್ಪಟ್ಟು ದೂರದಲ್ಲಿಯೂ ಸಮೀಪದಲ್ಲಿಯೂ ಚದರಿರುವ ಎಲ್ಲಾ ಇಸ್ರಾಯೇಲ್ಯರೂ ನಾಚಿಕೆಗೆ ಈಡಾಗಿದ್ದಾರೆ.


ವೈರಿಗಳೂ ವಿರೋಧಿಗಳೂ ಯೆರೂಸಲೇವಿುನ ಬಾಗಿಲುಗಳಲ್ಲಿ ಹೆಜ್ಜೆಯಿಡುವರೆಂದು ಭೂಪತಿನಿವಾಸಿಗಳಲ್ಲಿ ಯಾರೂ ನಂಬಿರಲಿಲ್ಲ.


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ - ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು;


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ನಾನು ಕೆಲವರನ್ನು ಖಡ್ಗ ಕ್ಷಾಮವ್ಯಾಧಿಗಳಿಂದ ಉಳಿಸಿ ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವದಕ್ಕೆ ಅವಕಾಶಮಾಡುವೆನು; ನಾನೇ ಯೆಹೋವನು ಎಂದು ಆ ಜನಾಂಗಗಳಿಗೂ ಗೊತ್ತಾಗುವದು.


ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಯೆರೂಸಲೇವಿುಗೆ ಮಾಡಿದ್ದೆಲ್ಲಾ ಸುಮ್ಮನೆ ಮಾಡಿದ್ದಲ್ಲವೆಂದು ನಿಮಗೆ ತಿಳಿದುಬರುವದು; ಇದು ಕರ್ತನಾದ ಯೆಹೋವನ ನುಡಿ.


ಇದಲ್ಲದೆ ಇಸ್ರಾಯೇಲ್ಯರು ತಮ್ಮ ಅಧರ್ಮದ ನಿವಿುತ್ತವೇ ಸೆರೆಯಾಗಿ ಹೋದರೆಂತಲೂ ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವದು;


ಆತನು ಅದನ್ನೇ ಬರಮಾಡಿ ತನ್ನ ಮಾತನ್ನು ನೆರವೇರಿಸಿದ್ದಾನೆ; ನೀವು ಯೆಹೋವನ ಧ್ವನಿಗೆ ಕಿವಿಗೊಡದೆ ಆತನಿಗೆ ಪಾಪಮಾಡಿದ್ದರಿಂದಲೇ ಇದು ನಿಮಗೆ ಸಂಭವಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು