Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:26 - ಕನ್ನಡ ಸತ್ಯವೇದವು J.V. (BSI)

26 ಇವರ ಪಿತೃಗಳು ಬಾಳನನ್ನು ಸೇರಿ ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ ತಾವು ತಮ್ಮ ನೆರೆಹೊರೆಯವರಿಗೆ ತಿಳಿಸುವ ತಮ್ಮ ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇವರ ಪೂರ್ವಜರು ಬಾಳ್‍ದೇವತೆಯನ್ನು ಸೇರಿಕೊಂಡು ನನ್ನ ಹೆಸರನ್ನು ಮರೆತುಬಿಟ್ಟರು. ಅದೇ ಪ್ರಕಾರ ಈ ಪ್ರವಾದಿಗಳು ಸ್ವಕಲ್ಪಿತ ಸುಳ್ಳು ಕನಸುಗಳನ್ನು ಒಬ್ಬರಿಗೊಬ್ಬರು ತಿಳಿಸುವುದರ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:26
13 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಎಲೋ, ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕುಮಾಡುವದನ್ನು ಬಿಡುವದಿಲ್ಲವೋ?


ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವದಕ್ಕೆ ಇನ್ನೆಷ್ಟು ಕಾಲ ಹಿಡಿಯುವದೋ?


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;


ಮಹನೀಯರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸಿ ನನ್ನನ್ನು ಅವಮಾನ ಪಡಿಸುವಿರಿ? ಯಾಕೆ ನಿರರ್ಥಕವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು