Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 23:8 - ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 23:8
24 ತಿಳಿವುಗಳ ಹೋಲಿಕೆ  

ಜನಾಂಗಗಳ ವಶದಿಂದ ತಪ್ಪಿಸಿ ದೇಶದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿ ಇಸ್ರಾಯೇಲಿನ ಬೆಟ್ಟಗಳಲ್ಲಿಯೂ ತೊರೆಗಳ ಬಳಿಯಲ್ಲಿಯೂ ಸೀಮೆಯ ಎಲ್ಲಾ ಹಕ್ಕೆಗಳಲ್ಲಿಯೂ ಮೇಯಿಸುವೆನು.


ಆ ಕಾಲದಲ್ಲಿ ನಿಮ್ಮನ್ನು ಕರತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು; ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೆ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿಸ್ತೋತ್ರಗಳಿಗೆ ಗುರಿಮಾಡುವೆನು. ಇದು ಯೆಹೋವನ ನುಡಿ.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ ಆಮೇಲೆ ಒಟ್ಟುಗೂಡಿಸಿ ಸ್ವದೇಶಕ್ಕೆ ತಂದದರಿಂದ ನಾನೇ ತಮ್ಮ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ತಿರಿಗಿ ಬರಮಾಡುವೆನು; ಅವು ದೊಡ್ಡ ಪೀಳಿಗೆಯಾಗಿ ಹೆಚ್ಚುವವು.


ಯೆಹೋವನು ಯಾಕೋಬ್ಯರನ್ನು ಕನಿಕರಿಸಿ ಮತ್ತೆ ಇಸ್ರಾಯೇಲ್ಯರನ್ನು ಆರಿಸಿಕೊಂಡು ಸ್ವದೇಶದಲ್ಲಿ ತಂಗಿಸಬೇಕೆಂದಿದ್ದಾನಷ್ಟೆ; ಪರದೇಶಿಗಳು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.


ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತದೇಶಗಳಿಂದಲೂ ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದನೋ ಅಲ್ಲಿಗೆ ತಿರಿಗಿ ಬರಮಾಡುವೆನು. ಇದು ಯೆಹೋವನ ನುಡಿ.


ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ.


ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಇಗೋ, ನಾನು ಕೋಪರೋಷ ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟುಬರುವಂತೆ ನಾನು ಅವರನ್ನು ಹುರಿಗೊಳಿಸಿ ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು;


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಯೆಹೋವನು ಹೀಗನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಜನರು ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು


ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.


ನೀನು ಐಗುಪ್ತದೇಶದೊಳಗಿಂದ ಪಾರಾಗಿ ಬಂದ ಕಾಲದಲ್ಲಿ ನಾನು ತೋರಿಸಿದಂತೆ ಅದ್ಭುತಗಳನ್ನು ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು