Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 24:7 - ಕನ್ನಡ ಸತ್ಯವೇದವು J.V. (BSI)

7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 24:7
32 ತಿಳಿವುಗಳ ಹೋಲಿಕೆ  

ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ನೀವು ನನಗೆ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಇಸ್ರಾಯೇಲಿಗೆ ಇಷ್ಟು ದಂಡನೆ ಆದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ತಿರುಗಿಕೊಂಡಿದ್ದಾಳೆ ಎಂಬದು ಯೆಹೋವನಾದ ನನ್ನ ನುಡಿ.


ಆಕಾಶವನ್ನು ನಿಲ್ಲಿಸಬೇಕೆಂತಲೂ ಭೂಲೋಕವನ್ನು ಸ್ಥಾಪಿಸಬೇಕೆಂತಲೂ ಚೀಯೋನಿಗೆ ನೀನು ನನ್ನ ಜನವೆಂದು ಹೇಳಬೇಕೆಂತಲೂ ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟು ನನ್ನ ಕೈಯ ನೆರಳಿನಲ್ಲಿ ನಿನ್ನನ್ನು ಹುದುಗಿಸಿದ್ದೇನೆ.


ನಿನ್ನ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು - ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು ಎಂದು ಒಪ್ಪಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿನ್ನನ್ನು ಪ್ರಾರ್ಥಿಸುವದಾದರೆ


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಆತನ ಕಟ್ಟಳೆಗಳನ್ನು ಕೈಕೊಂಡು ಸಂಪೂರ್ಣಮನಸ್ಸಿನಿಂದ ಆತನನ್ನು ಹುಡುಕುವವರು ಭಾಗ್ಯವಂತರು.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ರಾಜ್ಯವು ಎಪ್ಪತ್ತು ವರುಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು, ಇದು ಕರ್ತನಾದ ಯೆಹೋವನ ನುಡಿ.


ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳಲು ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು;


ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ಆಮೇಲೆ ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.


ಬೇಡುವ ಧಾನ್ಯದ್ರಾಕ್ಷಾರಸತೈಲಗಳಿಗೆ ಭೂವಿುಯು ಒಲಿಯುವದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು