Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:22 - ಕನ್ನಡ ಸತ್ಯವೇದವು J.V. (BSI)

22 ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತೂರಿನ ಮತ್ತು ಚೀದೋನಿನ ಎಲ್ಲಾ ರಾಜರು ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಬಹಳ ದೂರದೇಶದ ರಾಜರು ಸಹ ಈ ಪಾತ್ರೆಯಿಂದ ಕುಡಿಯುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:22
20 ತಿಳಿವುಗಳ ಹೋಲಿಕೆ  

ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆಹಾಕಿ ತನ್ನ ಸೈನಿಕರಿಂದ ಬಹುಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ತೂರಿನಿಂದ ಸಂಬಳವೇನೂ ಸಿಕ್ಕಲಿಲ್ಲ.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.


ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇವಿುನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋವಿುನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು;


ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಅಂಗಲಾಚಿರಿ! [ನಿಮ್ಮ ಆಶ್ರಯವು] ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. (ಕಿತ್ತೀಮ್ ದೇಶೀಯರಿಂದ ಅವುಗಳಿಗೆ ತಿಳಿಯಿತು).


ಚೀದೋನೇ, ನಾಚಿಕೆಪಡು; ಸಮುದ್ರವು, ಸಮುದ್ರದುರ್ಗವು - ನಾವು ವೇದನೆಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿಯುವಕರನ್ನು ಸಾಕಿ ಸಲಹಲಿಲ್ಲ ಎಂದು ನುಡಿದಿದೆಯಷ್ಟೆ.


ಆ ಕಾಲದಲ್ಲಿ ತೂರ್‍ಪಟ್ಟಣವು ಒಬ್ಬ ರಾಜನ ಆಡಳಿತದ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷದ ಮೇಲೆ ಸೂಳೆಯ ವಿಷಯವಾದ ಗೀತದಂತಾಗುವದು.


ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ನಿಶ್ಚಿತವಾಗುವದು.


ನಿನ್ನ ಆಸ್ತಿಯು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಂಡಿಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ಮುಣುಗಿಹೋಗುವದು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನರಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದರ ವಿಷಯದಲ್ಲಿ ಹೀಗೆ ನುಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು