Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:28 - ಕನ್ನಡ ಸತ್ಯವೇದವು J.V. (BSI)

28 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಲ್ಲದಿದ್ದರೆ ನೀನು ಅವರಿಗೆ ಹೀಗೆ ಹೇಳು - ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನೀವು ಕುಡಿಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಒಂದು ವೇಳೆ ಅವರು ಆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಪ್ಪದಿದ್ದರೆ ಅವರಿಗೆ ಹೀಗೆಂದು ಹೇಳು - ‘ಸರ್ವಶಕ್ತ ಸರ್ವೇಶ್ವರನ ನುಡಿ ಇವು: ನೀವು ಕುಡಿಯಲೇಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಅವರು ನಿನ್ನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನ್ನು ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ‘ನೀವು ಈ ಪಾತ್ರೆಯಿಂದ ಕುಡಿಯಲೇಬೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:28
12 ತಿಳಿವುಗಳ ಹೋಲಿಕೆ  

ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ಯೆಹೋವನು ಇಂತೆನ್ನುತ್ತಾನೆ - ಪಾತ್ರೆಯಲ್ಲಿ ಕುಡಿಯುವದು ಯಾರ ಪಾಲಿಗೆ ಬರಲಿಲ್ಲವೋ ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿಯಲೇ ಕುಡಿಯುವಿ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.


ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.


[ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು