Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:29 - ಕನ್ನಡ ಸತ್ಯವೇದವು J.V. (BSI)

29 ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವುದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ” ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಈಗಾಗಲೆ ನನ್ನ ಹೆಸರುಗೊಂಡಿರುವ ಜೆರುಸಲೇಮ್ ನಗರಕ್ಕೆ ಕೇಡಾಗುವಂತೆ ಮಾಡುತ್ತಿದ್ದೇನೆ. ನಿಮ್ಮನ್ನು ದಂಡನೆಗೆ ಗುರಿ ಮಾಡಲಾಗುವುದಿಲ್ಲವೆಂದು ನೀವು ಯೋಚಿಸುತ್ತಿರಬಹುದು. ಆದರೆ ನಿಮ್ಮ ಯೋಚನೆ ತಪ್ಪು. ನಿಮ್ಮನ್ನು ದಂಡಿಸಲಾಗುವುದು. ಈ ಭೂಮಿಯ ಮೇಲಿನ ಜನರೆಲ್ಲರ ಮೇಲೆ ಆಕ್ರಮಣಮಾಡಲು ನಾನು ಒಂದು ಖಡ್ಗವನ್ನು ಕರೆಯುತ್ತಿದ್ದೇನೆ.’” ಇದು ಯೆಹೋವನ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:29
19 ತಿಳಿವುಗಳ ಹೋಲಿಕೆ  

ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ಶಿಷ್ಟನೇ ಭೂವಿುಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ ದುಷ್ಟನೂ ಪಾಪಿಯೂ ಅನುಭವಿಸುವರು ಎಂದು ಹೇಳಬೇಕಾಗಿಲ್ಲ.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


[ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು.


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಯೆಹೋವನು ಇಂತೆನ್ನುತ್ತಾನೆ - ಪಾತ್ರೆಯಲ್ಲಿ ಕುಡಿಯುವದು ಯಾರ ಪಾಲಿಗೆ ಬರಲಿಲ್ಲವೋ ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿಯಲೇ ಕುಡಿಯುವಿ.


ಮರ ಹಸಿಯಾಗಿರುವಾಗ ಇಷ್ಟೆಲ್ಲಾ ಮಾಡಿದರೆ ಮರ ಒಣಗಿರುವಾಗ ಏನಾಗಬಹುದು? ಅಂದನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ.


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಆಗ ನೀನು ಅವರಿಗೆ - ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಯೆರೂಸಲೇವಿುನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ ನಾನು ಅಮಲಿನಿಂದ ತುಂಬಿಸಿ


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ ಅಶ್ಶೂರದ ರಾಜನ ಉಬ್ಬಟೆಯ ಕೊಚ್ಚಾಟಕ್ಕೂ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.


ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು