Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:3 - ಕನ್ನಡ ಸತ್ಯವೇದವು J.V. (BSI)

3 ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:3
32 ತಿಳಿವುಗಳ ಹೋಲಿಕೆ  

ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.


ಅವನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ದೇಶವನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವದಕ್ಕೋಸ್ಕರ ಅಚಲ್ಯನ ಮಗನಾದ ಶಾಫಾನನನ್ನೂ ಪುರಾಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.


ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.


ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು;


ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ಹೊರಟು ಅಡವಿಯ ಸ್ಥಳಕ್ಕೆ ಹೋಗಿ ದೇವರನ್ನು ಪ್ರಾರ್ಥಿಸುತ್ತಿದ್ದನು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಾ - ಅಹಹ, ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ ಎಂದು ಪ್ರಕಟಿಸುತ್ತಾ ಬಂದರೂ ಅವರು ಕಿವಿಗೊಟ್ಟು ಕೇಳಲಿಲ್ಲ,


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಮಾತನ್ನು ಕೇಳಿ ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೇದು!


ಆಗ ಇಸ್ರಾಯೇಲ್ಯರ ಅರಸನು ತನ್ನ ಸೇವಕರಿಗೆ - ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ; ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ತಿರಿಗಿ ತೆಗೆದುಕೊಳ್ಳದೆ ಸುಮ್ಮನೆ ಕೂತಿರುತ್ತೇವೆ ಎಂದು ಹೇಳಿ


ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು.


ಅವರ ಪಿತೃಗಳ ದೇವರಾದ ಯೆಹೋವನು ತನ್ನ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ ಸಾವಕಾಶಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಇದ್ದರೂ


ನಿಮ್ಮ ಪಿತೃಗಳು ಐಗುಪ್ತದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ಸಾವಕಾಶ ಮಾಡದೆ ಕಳುಹಿಸಿದ್ದೇನೆ.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ.


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು