Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:31 - ಕನ್ನಡ ಸತ್ಯವೇದವು J.V. (BSI)

31 ಶಬ್ದವು ಭೂವಿುಯ ಕಟ್ಟ ಕಡೆಯವರೆಗೆ ವ್ಯಾಪಿಸುವದು; ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ; ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು; ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:31
14 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.


ಯೆಹೋವನು ಯೆಹೂದದ ಮೇಲೆ ವ್ಯಾಜ್ಯಹಾಕಿದ್ದಾನೆ, ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು, ಅದರ ದುಷ್ಕೃತ್ಯಗಳಿಗೆ ಪ್ರತೀಕಾರಮಾಡುವನು.


ಏಕಂದರೆ ಯೆಹೋವನು ಮುಯ್ಯಿತೀರಿಸುವ ದಿನವು ಬಂದಿದೆ; ಚೀಯೋನಿನ ವ್ಯಾಜ್ಯದಲ್ಲಿ [ಎದೋವಿುಗೆ] ದಂಡನೆವಿಧಿಸತಕ್ಕ ವರುಷವು ಒದಗಿದೆ.


ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡಿ ಅವನ ಮೇಲೂ ಅವನ ಗುವ್ಮಿುಗಳ ಮೇಲೂ ಅವನೊಂದಿಗಿರುವ ಬಹುಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನುಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಬಾಚಿಕೊಂಡುಹೋಗುವದಕ್ಕೆ ನಿನಗೆ ಅವಕಾಶಕೊಡುವೆನು. ಇದು ಯೆಹೋವನಾದ ನನ್ನ ನುಡಿ.


ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು.


ನೀನಾದರೆ - ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ತೊಲಗಿ ಹೋಗಿದೆ ನಿಶ್ಚಯ ಎಂದುಕೊಂಡಿದ್ದೀ; ನಾನು ಪಾಪಮಾಡಲಿಲ್ಲವೆಂದು ನೀನು ಹೇಳಿದ ಕಾರಣ, ಇಗೋ ನಾನು ನಿನಗೆ ನ್ಯಾಯತೀರಿಸುವೆನು.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಸುಂಟರಗಾಳಿಯು, ಹೊರಟಿದೆ; ಅದು ದುಷ್ಟರ ತಲೆಯ ಮೇಲೆ ಹೊಡೆಯುವದು.


ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು