Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:38 - ಕನ್ನಡ ಸತ್ಯವೇದವು J.V. (BSI)

38 ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:38
15 ತಿಳಿವುಗಳ ಹೋಲಿಕೆ  

ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.


ನಾನು ಎಫ್ರಾಯೀವಿುಗೆ ಸಿಂಹವೂ ಯೆಹೂದಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ಎತ್ತಿಕೊಂಡು ಒಯ್ಯಲು ಯಾರೂ ಬಿಡಿಸರು.


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಇಗೋ, ವಿವರಿಸುವ ದೇವದೂತನು ಮುಂದರಿದು ತನ್ನನ್ನು ಎದುರುಗೊಳ್ಳುವದಕ್ಕೆ ಬಂದ ಮತ್ತೊಬ್ಬ ದೇವದೂತನಿಗೆ ಹೀಗೆ ಹೇಳಿದನು -


ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವದಲ್ಲವೆ, ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೆ; ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವದು, ಐಗುಪ್ತದ ನದಿಯ ಹಾಗೆಯೇ ಇಳಿದುಹೋಗುವದು.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಡುವಲಿಂದ ನಡುಗುತ್ತಾ ಬರುವರು;


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಸಾಲೇವಿುನಲ್ಲಿ ಆತನ ಬೀಡಾರವಿದೆ; ಚೀಯೋನಿನಲ್ಲಿ ಆತನು ನಿವಾಸಿಸುತ್ತಾನೆ.


ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು.


ಇಂತಿರಲು ನೀನು ಪ್ರವಾದಿಸುತ್ತಾ ಈ ಮಾತುಗಳನ್ನೆಲ್ಲಾ ಅವರಿಗೆ ಹೇಳು - ಯೆಹೋವನು ಉನ್ನತಲೋಕದಿಂದ ಗರ್ಜಿಸುವನು, ತನ್ನ ಘನನಿವಾಸದಿಂದ ದನಿಗೈಯುವನು; ಆತನು ಗಟ್ಟಿಯಾಗಿ ಗರ್ಜಿಸಿ ತನ್ನ ಹುಲ್ಗಾವಲಿನ ಮಂದೆಯನ್ನು ಬೆದರಿಸುವನು; ದ್ರಾಕ್ಷೆಯ ಹಣ್ಣನ್ನು ತುಳಿಯುವವರು ಕೂಗಾಡುವಂತೆ ಭೂನಿವಾಸಿಗಳೆಲ್ಲರಿಗೂ ಭಯಂಕರನಾಗಿ ಕೂಗುವನು.


ಬೀಜಬಿತ್ತುವವನನ್ನೂ ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನಿಂದ ನಿರ್ಮೂಲಮಾಡಿರಿ; ಪ್ರತಿಯೊಬ್ಬ ವಿದೇಶೀಯನು ಹಿಂಸೆಯ ಖಡ್ಗದ ದೆಸೆಯಿಂದ ಸ್ವಜನದ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು