Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಿಮ್ಮ ಕೈ ಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ಕೇಡನ್ನು ತಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನೀವು ನನ್ನ ಮಾತನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ. “ನೀವು ಮನುಷ್ಯನು ಮಾಡಿದ ವಿಗ್ರಹಗಳನ್ನು ಪೂಜಿಸಿದಿರಿ. ಅದೇ ನನಗೆ ಕೋಪ ತಂದಿತು. ಅದು ನಿಮಗೇ ಕೇಡನ್ನು ಉಂಟುಮಾಡಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:7
15 ತಿಳಿವುಗಳ ಹೋಲಿಕೆ  

ಅವರು ಐಗುಪ್ತದೇಶವನ್ನು ಬಿಟ್ಟು ಬಂದ ಪಿತೃಗಳ ಕಾಲ ಮೊದಲುಗೊಂಡು ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ ಎಂದು ಹೇಳಿಸಿದನು.


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ - ನೀವು ನನ್ನ ಮಾತುಗಳನ್ನು ಕೇಳದ ಕಾರಣ


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.


ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು