Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:10 - ಕನ್ನಡ ಸತ್ಯವೇದವು J.V. (BSI)

10 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಹತ್ತಿಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕೂತುಕೊಂಡಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜುದೇಯದ ನಾಯಕರಿಗೂ ಈ ಸಮಾಚಾರ ಮುಟ್ಟಿತು. ಅವರು ಅರಮನೆಯಿಂದ ಧಾವಿಸಿಬಂದು ಸರ್ವೇಶ್ವರನಾಲಯದ ಹೊಸ ಬಾಗಿಲ ಬಳಿ ಆಸೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:10
15 ತಿಳಿವುಗಳ ಹೋಲಿಕೆ  

ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.


ಎಲ್ನಾಥಾನನೂ ದೆಲಾಯನೂ ಗೆಮರ್ಯನೂ - ದಯಮಾಡಿ ಸುರಳಿಯನ್ನು ಸುಡಬಾರದೆಂದು ಅರಸನಿಗೆ ವಿಜ್ಞಾಪನೆಮಾಡಿದರೂ ಅವನು ಅವರ ಮಾತನ್ನು ಕೇಳಲಿಲ್ಲ.


ನನ್ನ ಒಡಂಬಡಿಕೆಯನ್ನು ಮೀರಿದ ಯೆಹೂದದ ಪ್ರಧಾನರು, ಯೆರೂಸಲೇವಿುನ ಪ್ರಧಾನರು, ಕಂಚುಕಿಗಳು, ಯಾಜಕರು, ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು,


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿದವನು ಇವನೇ.


ಅರಸನಾದ ಯೆಹೋಯಾಕೀಮನೂ ಅವನ ಎಲ್ಲಾ ಪ್ರಸಿದ್ಧ ಶೂರರೂ ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.


ಆಗ ತಾವು ತಮ್ಮ ತಮ್ಮ ದಾಸದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.


ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.


ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು