Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:14 - ಕನ್ನಡ ಸತ್ಯವೇದವು J.V. (BSI)

14 ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:14
13 ತಿಳಿವುಗಳ ಹೋಲಿಕೆ  

ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ನರಜಾತಿಯವರು ವಾಸಿಸುವ ಸಕಲ ಪ್ರಾಂತಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ.


ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವದು ಸರಿಯೋ ಒಳ್ಳೆದೋ ಆ ಕಡೆಗೆ ಹೋಗು ಎಂದು ಹೇಳಿದನು.


ಆಗ ಆ ರಾಯಭಾರಿಗಳಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು -


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.


ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವದು ಯಾರಿಂದಾದೀತು ಎಂದು ಹೇಳಿದನು.


ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.


ಆತನ ಕೈ ನನ್ನ ದ್ರೋಹಗಳನ್ನು ನೊಗದ ಕಣ್ಣಿಗಳನ್ನೋ ಎಂಬಂತೆ ನನಗೆ ಬಿಗಿದಿದೆ. ಅವು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.


ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವದರಲ್ಲಿಯೇ ಇಷ್ಟಪಡುವ ಕಡಸಾಗಿದೆ; [ಈಗಲಾದರೋ] ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ, ಎಫ್ರಾಯೀಮನ್ನು ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು