Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:22 - ಕನ್ನಡ ಸತ್ಯವೇದವು J.V. (BSI)

22 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೂದದ ಬಂಧಿಗಳೆಲ್ಲಾ ಬೇರೆಯವರಿಗೆ ಕೇಡಾಗಲಿ ಎಂದು ಕೇಳಿಕೊಳ್ಳುವಾಗ ಆ ಜನರ ಉದಾಹರಣೆ ಕೊಡುವರು. ಆ ಬಂಧಿಗಳು ಹೀಗೆನ್ನುವರು: ‘ಬಾಬಿಲೋನಿನ ರಾಜನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:22
7 ತಿಳಿವುಗಳ ಹೋಲಿಕೆ  

ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವನು ಎಂದು ಸಾರಿದನು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಅದರಂತೆ ಶಲ್ಯ ಇಜಾರು ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ಕರ್ತನು ಬರುತ್ತಾನೆ.


ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು.


ಆ ಕಾಲದಲ್ಲಿ ಅವನು ಅವರನ್ನು ಆಶೀರ್ವದಿಸಿ - ಇಸ್ರಾಯೇಲ್ಯರು ಯಾರನ್ನಾದರೂ ಆಶೀರ್ವದಿಸುವಾಗ - ಎಫ್ರಾಯೀಮನಿಗೂ ಮನಸ್ಸೆಗೂ ಉಂಟಾದ ಸಂತತಿಯಂತೆ ದೇವರು ನಿನಗೂ ಸಂತಾನವನ್ನು ಅನುಗ್ರಹಿಸಲಿ ಎಂದು ನಿಮ್ಮನ್ನು ದೃಷ್ಟಾಂತಮಾಡಿ ಹೇಳುವರು ಅಂದನು. ಹೀಗೆ ಹೇಳಿದ್ದರಿಂದ ಎಫ್ರಾಯೀಮನನ್ನು ಮನಸ್ಸೆಗೆ ಮುಂದಾಗಿ ಇಟ್ಟನು.


ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು