Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:32 - ಕನ್ನಡ ಸತ್ಯವೇದವು J.V. (BSI)

32 ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:32
24 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನ್ನನ್ನು ಭೂವಿುಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರುಷ ಸಾಯುವಿ ಎಂದು ಹೇಳಿದನು.


ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭಸಂಭವಿಸಿದರೂ ಅದನ್ನು ಕಾಣನು; ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.


ಯೆಹೋವನು ಇಂತೆನ್ನುತ್ತಾನೆ - ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾವನೂ ದಾವೀದನ ಸಿಂಹಾಸನದಲ್ಲಿ ಕೂತು ಯೆಹೂದವನ್ನು ಆಳಿ ಬಾಳನು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು, ನಿನ್ನ ಗಂಡುಹೆಣ್ಣುಮಕ್ಕಳು ಖಡ್ಗದಿಂದ ಹತರಾಗುವರು, ನಿನ್ನ ದೇಶವನ್ನು [ಶತ್ರುಗಳು] ನೂಲೆಳೆದು ಭಾಗಿಸಿಕೊಳ್ಳುವರು, ನೀನಂತು ಅಪವಿತ್ರ ದೇಶದಲ್ಲಿ ಸಾಯುವಿ, ಇಸ್ರಾಯೇಲು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು ಖಂಡಿತ ಎಂಬದಾಗಿ ಹೇಳಿದನು.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.


ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ; ನೀನೂ ನಿನ್ನ ವಿುಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬೆಲಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ ಎಂದು ನುಡಿದಿದ್ದಾನೆ.


ಸೇನಾಧೀಶ್ವರನಾದ ಯೆಹೋವನಿಂದ ಒಂದು ಮಾತು ಹೊರಟಿತು - ನಾನು ಅವರಿಗೆ ವಿರುದ್ಧವಾಗಿ ಎದ್ದು ಬಾಬೆಲಿನಿಂದ ಹೆಸರನ್ನೂ ಜನಶೇಷವನ್ನೂ ಪುತ್ರ ಪೌತ್ರರನ್ನೂ ಕತ್ತರಿಸಿಬಿಡುವೆನು;


ನೀನು ಆ ರಾಜರಂತೆ ಗೋರಿಗೆ ಸೇರುವದಿಲ್ಲ; ನಿನ್ನ ಪ್ರಜೆಯನ್ನು ಕೊಂದು ನಿನ್ನ ದೇಶವನ್ನು ಹಾಳುಮಾಡಿದ್ದೀ, ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಿರುವದಲ್ಲವೆ.


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


[ಆಮೇಲೆ ಯೆಹೋವನು ಯೆರೆಮೀಯನಿಗೆ ಈ ಅಪ್ಪಣೆಯನ್ನು ಕೊಟ್ಟನು] - ನೀನು ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕು -


ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಇವನೂ ಇವನ ಸಂತತಿಯವರೂ ಸೇವಕರೂ ನಡಿಸಿದ ಅಧರ್ಮಕ್ಕಾಗಿ ಇವರನ್ನು ದಂಡಿಸುವೆನು. ನಾನು ಇವರನ್ನೂ ಯೆರೂಸಲೇವಿುನವರನ್ನೂ ಯೆಹೂದ್ಯರನ್ನೂ ನಿಮಗೆ ಬಹು ಕೇಡಾಗುವದೆಂದು ಎಚ್ಚರಿಸಿದರೂ ಇವರುಗಳು ಕೇಳಲಿಲ್ಲವಾದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಮ್ಮನ್ನು ಆಪತ್ತು ಹಿಂದಟ್ಟಿ ಹಿಡಿಯದು, ಎದುರುಬಿದ್ದು ಮುತ್ತದು ಅಂದುಕೊಂಡ ನನ್ನ ಜನರಲ್ಲಿನ ಸಮಸ್ತ ಪಾಪಿಗಳು ಖಡ್ಗ ಹತರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು