Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಇಂತೆನ್ನುತ್ತಾನೆ - ನಿನಗೆ ಮುಂದೆ ಒಳ್ಳೆಯ ಗತಿಯಾಗುವದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರ ಇಂತೆನ್ನುತ್ತಾರೆ: “ನಿನ್ನ ಭವಿಷ್ಯದ ಬಗ್ಗೆ ಭರವಸೆಯಿಂದಿರು ನಿನ್ನ ಮಕ್ಕಳು ಹಿಂದಿರುಗಿ ಸ್ವದೇಶ ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ಇಸ್ರೇಲೇ, ನಿನ್ನ ಮಕ್ಕಳು ತಮ್ಮ ದೇಶಕ್ಕೆ ಹಿಂತಿರುಗಿ ಬರುವರೆಂಬ ನಿರೀಕ್ಷೆ ನಿನಗಿರಲಿ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:17
19 ತಿಳಿವುಗಳ ಹೋಲಿಕೆ  

ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.


ಅಯ್ಯೋ, ನನ್ನ ಶಕ್ತಿಯು ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯು ವ್ಯರ್ಥ ಅಂದುಕೊಂಡೆನು.


[ಕರ್ತನು] ಆ ದಿನಗಳನ್ನು ಕಡಿಮೆಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯದು; ಆದರೆ ತಾನು ಆದುಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ ಆಮೇಲೆ ಒಟ್ಟುಗೂಡಿಸಿ ಸ್ವದೇಶಕ್ಕೆ ತಂದದರಿಂದ ನಾನೇ ತಮ್ಮ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು.


ಒಂದು ವೇಳೆ ಸುಗತಿಯಾದೀತೆಂದು ತನ್ನ ಬಾಯಿಯನ್ನು ದೂಳಿಗೆ ಮುಟ್ಟಿಸಲಿ.


ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು


ಸುನಿರೀಕ್ಷೆಯುಂಟಾದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು [ಸುಖವನ್ನು] ದಯಪಾಲಿಸುವೆನು ಎಂದು ಈಗಲೂ ಪ್ರಕಟಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು