Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:9 - ಕನ್ನಡ ಸತ್ಯವೇದವು J.V. (BSI)

9 ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಜನರು ಹಿಂತಿರುಗಿ ಬರುವಾಗ ಅಳುತ್ತಿರುವರು. ಆದರೆ ನಾನು ಅವರಿಗೆ ದಾರಿತೋರಿಸುವೆನು, ಸಮಾಧಾನಪಡಿಸುವೆನು. ನಾನು ಅವರನ್ನು ನದಿ ದಾಟಿಸಿಕೊಂಡು ಬರುವೆನು. ಅವರು ಎಡವದಂತೆ ಸಮವಾದ ಮಾರ್ಗದಲ್ಲಿ ನಡೆಸಿಕೊಂಡು ಬರುವೆನು. ನಾನು ಇಸ್ರೇಲಿನ ತಂದೆ; ಎಫ್ರಾಯೀಮ್ ನನ್ನ ಚೊಚ್ಚಲ ಮಗ. ಆದ್ದರಿಂದಲೇ ನಾನು ಅವರನ್ನು ನಡೆಸಿಕೊಂಡು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:9
43 ತಿಳಿವುಗಳ ಹೋಲಿಕೆ  

ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ಈಗತಾನೆ ನನ್ನನ್ನು - ನನ್ನ ತಂದೆ, ನನ್ನ ಯೌವನದ ಆಪ್ತನು ಎಂದು ಕರೆಯುತ್ತೀಯಲ್ಲಾ.


ಆದಕಾರಣ ನೀನು ಫರೋಹನಿಗೆ - ಇಸ್ರಾಯೇಲ್ ಜನವು ನನಗೆ ಚೊಚ್ಚಲಮಗನಂತೆ ಇದೆ ಎಂದು ತಿಳುಕೋ; ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವದಕ್ಕೆ ಅವನಿಗೆ ಅಪ್ಪಣೆ ಕೊಡಬೇಕು;


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲ್ಯರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಯೆಹೋವನನ್ನು ಮರೆಹೊಗುವರು.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಸಾಗರದ ಅಡಿಯಲ್ಲಿ ಅವರನ್ನು ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಮುಗ್ಗರಿಸದಂತೆ ನಡೆಯಿಸಿದಾತನು ಎಲ್ಲಿ?


ಆತನು ಹಸುರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.


ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಆಟಂಕವನ್ನು ಎತ್ತಿಹಾಕಿರಿ ಎಂದು ಒಂದು ವಾಣಿಯು ನುಡಿಯುತ್ತದೆ.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು.


ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.


ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ.


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ನಡೆಯಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು [ಜನಾಂಗವನ್ನಾಗಿ] ಮಾಡಿ ಸ್ಥಾಪಿಸಿದನಲ್ಲವೇ.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನಂದರೆ - ನಮ್ಮ ಪಿತೃವಾಗಿರುವ ಇಸ್ರಾಯೇಲನ ದೇವರೇ, ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.


ಪಶ್ಚಿಮದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮಾ;


ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು.


ಜನವಿರುವ ಊರನ್ನು ಸೇರುವಂತೆ ಅವರನ್ನು ಸರಿಯಾದ ದಾರಿಯಲ್ಲಿ ನಡಿಸಿದನು.


ಮತ್ತು ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಯಿಸುವೆನು; ಅವರೆದುರಿನ ಕತ್ತಲನ್ನು ಬೆಳಕುಮಾಡಿ ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು.


ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ


[ಆದರೂ] ಇಸ್ರಾಯೇಲ್ಯರ ಸದಮಲಸ್ವಾವಿುಯೂ ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ - ಭವಿಷ್ಯತ್ತುಗಳ ವಿಷಯವಾಗಿ ನನ್ನನ್ನು ವಿಚಾರಿಸಿರಿ, ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು