Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 32:23 - ಕನ್ನಡ ಸತ್ಯವೇದವು J.V. (BSI)

23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಸ್ರೇಲಿನ ಜನರು ಈ ಪ್ರದೇಶಕ್ಕೆ ಬಂದು ಅದನ್ನು ತಮ್ಮದನ್ನಾಗಿ ಮಾಡಿಕೊಂಡರು. ಆದರೆ ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ; ನಿನ್ನ ಉಪದೇಶಗಳನ್ನು ಅನುಸರಿಸಲಿಲ್ಲ; ನಿನ್ನ ಆಜ್ಞೆಯಂತೆ ಮಾಡಲಿಲ್ಲ. ಆದ್ದರಿಂದ ನೀನು ಇಸ್ರೇಲರಿಗೆ ಇಂಥಾ ದುರ್ಗತಿ ಬರುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 32:23
32 ತಿಳಿವುಗಳ ಹೋಲಿಕೆ  

ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು.


ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!


ಯಾಕಂದರೆ ಯಾವನಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.


ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.


ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.


ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ಅವರು ದೇವರ ನಿಬಂಧನೆಯನ್ನು ಪಾಲಿಸದೆ ಆತನ ಧರ್ಮಶಾಸ್ತ್ರವನ್ನು ಅನುಸರಿಸಲೊಲ್ಲದೆ


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರತಂದು ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆನು; ಆದರೆ ನೀವು ಪ್ರವೇಶಿಸಿ ಆ ನನ್ನ ದೇಶವನ್ನು ಹೊಲೆಮಾಡಿ ನನ್ನ ಸ್ವಾಸ್ತ್ಯವನ್ನು ಅಸಹ್ಯಪಡಿಸಿದಿರಿ.


ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವು ನನ್ನ ಕಡೆಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟಿರುವ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯದೆ


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ಯೆಹೋವನು ಇಸ್ರಾಯೇಲ್ಯರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಿಸಿಕೊಂಡು ಅದರಲ್ಲಿ ವಾಸಮಾಡಿದರು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು