Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 33:9 - ಕನ್ನಡ ಸತ್ಯವೇದವು J.V. (BSI)

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 33:9
40 ತಿಳಿವುಗಳ ಹೋಲಿಕೆ  

ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.


ಸಮಸ್ತ ಇಸ್ರಾಯೇಲ್ ವಂಶವೂ ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರುವಾಸಿಯೂ ಸ್ತೋತ್ರವೂ ಮಹಿಮೆಯೂ ಆಗಿರಲೆಂದು ನಡುಕಟ್ಟು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳಲೊಲ್ಲದೆ ಹೋದರು ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನಿಗೆ ಜ್ಞಾಪಿಸುವವರೇ, ಆತನು ಯೆರೂಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವ ತನಕ ನಿಮಗೆ ವಿರಾಮವಿಲ್ಲದಿರಲಿ, ಆತನಿಗೂ ವಿರಾಮಕೊಡದಿರಿ.


ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗಗಳವರಿಗೆ ಮುಟ್ಟಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿದವರಾದರು. ಈ ಕಾರ್ಯವು ನಮ್ಮ ದೇವರಿಂದಲೇ ಪೂರೈಸಿತು ಎಂದು ಅವರಿಗೆ ಮಂದಟ್ಟಾಯಿತು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು; ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ ಆತನ ದಯೆಯನ್ನೂ ಭಯಭಕ್ತಿಯಿಂದ ಮರೆಹೊಗುವರು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.


ಆತನು ನನ್ನ ಬಾಯಲ್ಲಿ ನೂತನಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು.


ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇವಿುಗೆ ಮುತ್ತಿಗೆಹಾಕುವಾಗ ಯೆಹೂದಕ್ಕೆ ಇಕ್ಕಟ್ಟಾಗುವದು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇವಿುನ ಸರದಾರರು, ಶಿಲ್ಪಿಗಳು, ಕಮ್ಮಾರರು, ಇವರು ಯೆರೂಸಲೇವಿುನಿಂದ ತೊಲಗಿದ ಮೇಲೆ


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇವಿುಗೆ ಸಕಲ ಜನಾಂಗಗಳವರು ನೆರೆದುಬರುವರು; ಇನ್ನು ಮೇಲೆ ತಮ್ಮ ದುಷ್ಟಹೃದಯದ ಹಟದಂತೆ ನಡೆಯರು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನವುಂಟಾಯಿತು; ಅವರು ಸಂತೋಷದಿಂದಲೂ ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಯೆಹೋವನು ತಾನೇ ಇಸ್ರಾಯೇಲ್ಯರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.


ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,


ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರವೂ ನೀರನ್ನು ಕುದಿಸುವ ಉರಿಯೋಪಾದಿಯಲ್ಲಿಯೂ [ನೀನು ಪ್ರತ್ಯಕ್ಷನಾಗಿ]


ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ಯೆಹೋವನು ಇಂತೆನ್ನುತ್ತಾನೆ - ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಇಸ್ರಾಯೇಲ್ ಯೆಹೂದ ವಂಶಗಳ ವಿಷಯವಾಗಿ ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರುವವು.


ಅಯ್ಯೋ, ಹೆಸರುವಾಸಿಯ ಪಟ್ಟಣವು, ನನ್ನ ಇಷ್ಟದ ಪುರವು, ಏಕೆ ವಲಸೆಹೋಗಲಿಲ್ಲ!


ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ಹೌದು, ದೇಶದ ಸಕಲಪ್ರಜೆಗಳು ಅವರನ್ನು ಹೂಳಿಬಿಡುವರು; ಹೀಗೆ ನಾನು ಪ್ರಖ್ಯಾತಿಗೊಳ್ಳುವಾಗ ನನ್ನ ಜನರಿಗೆ ಹೆಸರುವಾಸಿಯಾಗುವದು; ಇದು ಕರ್ತನಾದ ಯೆಹೋವನ ನುಡಿ.


ನಿಮ್ಮ ಪಿತೃಗಳಿಗೆ ಸ್ವಾಸ್ತ್ಯವಾಗಿದ್ದ ದೇಶದಲ್ಲಿ ಸೇರಿಸಿ ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಮೇಲನ್ನುಂಟುಮಾಡಿ ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವನು.


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಯಾಜಕರನ್ನು ಮೃಷ್ಟಭೋಜನದಿಂದ ತಂಪುಗೊಳಿಸುವೆನು; ನಾನು ಅನುಗ್ರಹಿಸುವ ಮೇಲುಗಳನ್ನು ನನ್ನ ಜನರು ಸಮೃದ್ಧಿಯಾಗಿ ಅನುಭವಿಸುವರು. ಇದು ಯೆಹೋವನ ನುಡಿ.


ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.


ಮತ್ತೊಮ್ಮೆ ಹೀಗೆ ಸಾರು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು