Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:14 - ಕನ್ನಡ ಸತ್ಯವೇದವು J.V. (BSI)

14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:14
15 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ ನಿಮ್ಮನ್ನು ಕರೆದ ನನಗೆ ಉತ್ತರಕೊಡದೆ


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರಷ್ಟೆ;


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ಸಾವಕಾಶಮಾಡದೆ ಕಳುಹಿಸಿ ಹೇಳಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು. ಇದು ಯೆಹೋವನ ನುಡಿ.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಕೇಳಲೊಲ್ಲದ ನಿಮ್ಮ ಬಳಿಗೆ ನಾನು ಸಾವಕಾಶವಿಲ್ಲದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ -


ಅದಕ್ಕವರು - ನಾವು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ; ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ - ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು;


ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು