Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 35:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ಆಲಯಕ್ಕೆ ಕರೆದು ಇಗ್ದಲ್ಯನ ಮಗನೂ, ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಸರದಾರರ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆ ಇರುವ ಕೋಣೆಯೊಳಕ್ಕೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅನಂತರ ನಾನು ರೇಕಾಬ ವಂಶದವರನ್ನು ಯೆಹೋವನ ಆಲಯದಲ್ಲಿ ಕರೆತಂದೆನು. ನಾವು ಹಾನಾನನ ಮಕ್ಕಳ ಕೋಣೆ ಎಂದು ಕರೆಯಲ್ಪಡುವ ಕೋಣೆಯೊಳಕ್ಕೆ ಹೋದೆವು. ಹಾನಾನನು ಇಗ್ದಲ್ಯನೆಂಬವನ ಮಗನು. ಹಾನಾನನು ದೇವರ ಮನುಷ್ಯ. ಈ ಕೋಣೆಯು ಯೆಹೂದದ ರಾಜಕುಮಾರರ ಕೋಣೆಯ ಪಕ್ಕದಲ್ಲಿತ್ತು. ಇದು ಶಲ್ಲೂಮನ ಮಗನಾದ ಮಾಸೇಯನ ಕೋಣೆಯ ಮೇಲ್ಗಡೆ ಇತ್ತು. ಮಾಸೇಯನು ಆಲಯದ ದ್ವಾರಪಾಲಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 35:4
35 ತಿಳಿವುಗಳ ಹೋಲಿಕೆ  

ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -


ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.


ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತುಮಾಡಿ ಅದನ್ನು ಯೆಹೋವನ ಆಲಯದ ಬಾಗಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು,


ಆಗ ಅರಸನು ಎಲೀಯನನ್ನು ಕರತರುವದಕ್ಕಾಗಿ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕೂತಿರುವದನ್ನು ಕಂಡು ಅವನಿಗೆ - ದೇವರ ಮನುಷ್ಯನೇ ಇಳಿದು ಬಾ; ಅರಸನು ನಿನ್ನನ್ನು ಕರೆಯುತ್ತಾನೆ ಎಂದು ಹೇಳಿದನು.


ಆಗ ದೇವರ ಮನುಷ್ಯನಾದ ಶೆಮಾಯನಿಗೆ -


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ - ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಗೊತ್ತಿರುವದಷ್ಟೆ.


ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು.


ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು; ನೀತಿ ಭಕ್ತಿ ನಂಬಿಕೆ ಪ್ರೀತಿ ಸ್ಥಿರಚಿತ್ತ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವದಕ್ಕೆ ಪ್ರಯಾಸಪಡು.


ನನ್ನ ಹೊಸ್ತಲುನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವದರಿಂದಲೂ ಇನ್ನು ನನ್ನ ಪವಿತ್ರನಾಮವನ್ನು ಹೊಲೆಗೆಡಿಸರು; ಆಹಾ, ತಾವು ನಡಿಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು,


ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಹತ್ತಿಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕೂತುಕೊಂಡಿರಲಾಗಿ


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯ್ದುಕೊಂಡಿರುವದೇ ಲೇಸು.


ಅವರು ರಾತ್ರಿಯಲ್ಲಿಯೂ ದೇವಾಲಯದ ಸುತ್ತಲೂ ಇಳುಕೊಂಡು ಅವುಗಳನ್ನು ಕಾಯುತ್ತಿದ್ದರು; ಪ್ರತಿದಿನ ಬೆಳಿಗ್ಗೆ ಅವುಗಳನ್ನು ತೆರೆಯುತ್ತಿದ್ದರು.


ಅರಸನು ತನ್ನ ಹಸ್ತಕನಾದ ಸರದಾರನನ್ನು ಊರು ಬಾಗಲು ಕಾಯುವದಕ್ಕಾಗಿ ಕಳುಹಿಸಿದಲ್ಲಿ ಅವನು ಜನರಿಂದ ತುಳಿಯಲ್ಪಟ್ಟು ಸತ್ತನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲ್ಯರ ಅರಸನು ಹೇಳಿಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.


ಅವನು ಯೊರ್ದನಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಣುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ಆಗ ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಯೆಹೋವನು ಹೀಗನ್ನುತ್ತಾನೆ - ಯೆಹೋವನು ತಗ್ಗುಗಳ ದೇವರಲ್ಲ, ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವದು ಎಂದು ಹೇಳಿದನು.


ಆಗ ಆಕೆಯು ಅವನಿಗೆ - ನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು ಎಂದು ಹೇಳಿದಳು.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ಅವನನ್ನು ಹಿಂದಕ್ಕೆ ಕರಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ - ಆ ಶವವು ದೇವರ ಮನುಷ್ಯನದೇ ಆಗಿರಬೇಕು; ಅವನು ಯೆಹೋವನ ಆಜ್ಞೆಗೆ ಅವಿಧೇಯನಾದದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು ಎಂದು ಹೇಳಿ


ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು


ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ - ಯೆಹೋವನು ನಿನಗೆ ಹೇಳುವದೇನಂದರೆ - ಇಸ್ರಾಯೇಲ್ಯರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ


ಆಗ ಪ್ರವಾದಿಯು ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲಾ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ ಅದರ ದ್ವಾರವೂ ಕಾಣಿಸಿದವು; ಆ ಕೋಣೆಯೊಳಗೆ ಸರ್ವಾಂಗಹೋಮಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಯಾಜಕ ಮಾಸೇಯನ ಮಗನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು