Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 36:9 - ಕನ್ನಡ ಸತ್ಯವೇದವು J.V. (BSI)

9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ಐದನೆಯ ವರುಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇವಿುನವರೆಲ್ಲರೂ ಯೆಹೂದದ ಊರುಗಳಿಂದ ಯೆರೂಸಲೇವಿುಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋಯಾಕೀಮನ ಆಳ್ವಿಕೆಯ ಐದನೇ ವರ್ಷದ ಒಂಭತ್ತನೇ ತಿಂಗಳಲ್ಲಿ ಒಂದು ಉಪವಾಸವನ್ನು ಪ್ರಕಟಿಸಲಾಯಿತು. ಜೆರುಸಲೇಮ್ ನಗರದ ನಿವಾಸಿಗಳೆಲ್ಲರೂ ಯೆಹೂದದ ಬೇರೆ ಊರುಗಳಿಂದ ಜೆರುಸಲೇಮಿಗೆ ಬಂದವರೆಲ್ಲರೂ ಯೆಹೋವನ ಆಲಯದಲ್ಲಿ ಉಪವಾಸ ಮಾಡುವರೆಂದು ಗೊತ್ತುಪಡಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 36:9
16 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಗೊತ್ತುಮಾಡಿ ಸಾರಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.


ಆಗ ಪುಷ್ಯಮಾಸ; ಅರಸನು ಚಳಿಗಾಲದ ಮನೆಯಲ್ಲಿ ಕೂತಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯು ಉರಿಯುತ್ತಿತ್ತು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಮೊರೆಯಿಡಿರಿ; ಯಜ್ಞವೇದಿಯ ಸೇವಕರೇ, ಗೋಳಾಡಿರಿ; ನನ್ನ ದೇವರ ದಾಸರೇ, ಬನ್ನಿರಿ, ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದಿರ್ರಿ; ಧಾನ್ಯಪಾನನೈವೇದ್ಯಗಳು ನಿಮ್ಮ ದೇವರ ಆಲಯಕ್ಕೆ ಒದಗವು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲ್ಯರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.


ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಆಗ ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದವರೆಗೂ ಉಪವಾಸ ಮಾಡಿದರು. ಇದಲ್ಲದೆ ಅವರು ಆತನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ [ಯೆರೂಸಲೇವಿುನ] ಜನರಿಗೂ ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು