Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 38:20 - ಕನ್ನಡ ಸತ್ಯವೇದವು J.V. (BSI)

20 ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಯೆರೆಮೀಯನು, “ರಾಜನಾದ ಚಿದ್ಕೀಯನೇ, ಆ ಸೈನಿಕರು ನಿನ್ನನ್ನು ಯೆಹೂದದ ಆ ಜನರಿಗೆ ಒಪ್ಪಿಸುವುದಿಲ್ಲ. ನಾನು ಹೇಳಿದಂತೆ ಮಾಡಿ ಯೆಹೋವನ ಆಜ್ಞಾಪಾಲನೆ ಮಾಡು. ಆಗ ನಿನಗೆಲ್ಲ ಒಳ್ಳೆಯದಾಗುವುದು ಮತ್ತು ನಿನ್ನ ಪ್ರಾಣ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 38:20
20 ತಿಳಿವುಗಳ ಹೋಲಿಕೆ  

ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.


ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ನಾವು ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ಬುದ್ಧಿ ಹೇಳುವ ಹಾಗಾಯಿತು. ದೇವರೊಂದಿಗೆ ಸಮಾಧಾನವಾಗಿರೆಂದು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇವೆ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಆದಕಾರಣ ನೀನು ನನಗೆ ತಂಗಿಯಾಗಬೇಕೆಂದು ಅವರಿಗೆ ಹೇಳು; ಹೀಗೆ ಹೇಳಿದರೆ ನಿನ್ನ ನಿವಿುತ್ತ ನನಗೆ ಹಿತವಾಗುವದು, ನಾನು ನಿನ್ನ ದೆಸೆಯಿಂದ ಸಾಯದೆ ಬದುಕುವೆನು ಎಂದು ಹೇಳಿದನು.


ಅಗೋ, ಅಲ್ಲಿ ಒಂದು ಊರು ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವದು; ಆ ಊರು ಸಣ್ಣದಲ್ಲವೇ ಅಂದನು.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು.


ಆದರೆ ನೀನು - ಶತ್ರುವನ್ನು ಮರೆಹೊಗೆನು ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ -


ತಂದೆಯು ನನಗೆ ಬೋಧಕನಾಗಿ ಹೀಗೆಂದನು - ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.


ನನ್ನ ಉಪದೇಶವನ್ನು ಕಣ್ಣುಗುಡ್ಡಿನಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು.


ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;


ಯೆಹೋವನ ಕಡೆಗೆ ತಿರುಗಿಕೊಳ್ಳಿರಿ, ಬದುಕುವಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ನುಗ್ಗಿಯಾನು; ನುಂಗುವ ಆತನ ರೋಷಾಗ್ನಿಯನ್ನು ಆರಿಸುವದಕ್ಕೆ ಬೇತೇಲಿನಲ್ಲಿ ಯಾರೂ ಇರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು