Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:16 - ಕನ್ನಡ ಸತ್ಯವೇದವು J.V. (BSI)

16 ಇಗೋ, ಜನಾಂಗಗಳಿಗೆ ಅರುಹಿರಿ, ಮುತ್ತುವವರು ದೂರದೇಶದಿಂದ ಯೆರೂಸಲೇವಿುಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿಗೈಯುತ್ತಾರೆ, ಎಂದು ಪ್ರಚುರಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ಜನಾಂಗಗಳಿಗೆ ಅರುಹಿರಿ, “ಮುತ್ತುವವರು ದೂರದೇಶದಿಂದ ಯೆರೂಸಲೇಮಿಗೆ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರುದ್ಧವಾಗಿ ದನಿ ಎತ್ತುತ್ತಾರೆ” ಎಂದು ಪ್ರಚುರಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಗೋ ಅವರು ರಾಷ್ಟ್ರಗಳಿಗೆ ಅರುಹಿಸುವ ಸಮಾಚಾರ : ಮುತ್ತಿಗೆ ಹಾಕುವವರು ದೂರದೇಶದಿಂದ ಜೆರುಸಲೇಮಿಗೆ ಬರುವರು. ಜುದೇಯದ ಪಟ್ಟಣಗಳಿಗೆ ವಿರುದ್ಧ ಘೋಷಣೆಗಳನ್ನು ಪ್ರಕಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇದನ್ನು ಈ ಜನಾಂಗಕ್ಕೆ ತಿಳಿಸಿರಿ. ಜೆರುಸಲೇಮಿನ ಜನರಲ್ಲಿ ಈ ಸಮಾಚಾರವನ್ನು ಹರಡಿರಿ. ಬಹುದೂರದೇಶದಿಂದ ಶತ್ರುಗಳು ಬರುತ್ತಿದ್ದಾರೆ. ಆ ಶತ್ರುಗಳು ಯೆಹೂದದ ನಗರಗಳ ವಿರುದ್ಧ ಯುದ್ಧದ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:16
18 ತಿಳಿವುಗಳ ಹೋಲಿಕೆ  

ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಇಗೋ, ಇಸ್ರಾಯೇಲ್ ವಂಶವೇ, ಯೆಹೋವನ ಮಾತನ್ನು ಕೇಳು, ನಾನು ಒಂದು ಜನಾಂಗವನ್ನು ದೂರದಿಂದ ನಿಮ್ಮ ಮೇಲೆ ಬರಮಾಡುವೆನು; ಅದು ತಲತಲಾಂತರಗಳಿಂದ ಸ್ಥಿರವಾದ ಜನಾಂಗ, ಅದರ ಭಾಷೆಯು ನಿನಗೆ ತಿಳಿಯದು, ಅದು ಆಡುವ ಮಾತುಗಳನ್ನು ನೀನು ಗ್ರಹಿಸಲಾರೆ.


ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನ ಬಳಿಗೆ ಬಂದು ಅವನನ್ನು - ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು ಎಂದು ಕೇಳಲು ಅವನು - ಅವರು ಬಹುದೂರದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು ಎಂದು ಉತ್ತರ ಕೊಟ್ಟನು.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಒಂಭತ್ತನೆಯ ವರುಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ಆದಕಾರಣ, ಜನಾಂಗಗಳೇ, ಕೇಳಿರಿ! ಜನಸಮೂಹವೇ, ಅವರಲ್ಲಿ ನಡೆದದ್ದನ್ನು ಮನಸ್ಸಿಗೆ ತಂದುಕೋ!


ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವದು, ಕಾಡಿನ ತೋಳವು ಕೊಳ್ಳೆಮಾಡುವದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವದು; ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.


ಆ ನಗರಿಯು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ಅನ್ನುತ್ತಾನೆ.


ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳು ಮಾಡಿವೆ, ಅವನ ಊರುಗಳು ಸುಟ್ಟು ನಿರ್ನಿವಾಸಿಗಳಾಗಿವೆ.


ಜನಾಂಗಗಳೇ, ಸಮೀಪಿಸಿ ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂವಿುಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವದೆಲ್ಲವೂ ಆಲಿಸಲಿ.


ಇಗೋ, ನಾನು ಬಡಗಣ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇವಿುನ ಊರು ಬಾಗಲುಗಳ ಎದುರಿನಲ್ಲಿಯೂ ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.


ಬಿಲ್ಲನ್ನೂ ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು