Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:30 - ಕನ್ನಡ ಸತ್ಯವೇದವು J.V. (BSI)

30 ಎಲೈ, [ನಗರಿಯೇ,] ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು ನೀಲಾಂಜನದಿಂದ ವಿಶಾಲಾಕ್ಷಿಯಾದರೇನು, ನಿನ್ನನ್ನು ಸೊಗಸು ಮಾಡಿಕೊಳ್ಳುವದು ವ್ಯರ್ಥ; ನಿನ್ನ ವಿುಂಡರು ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:30
27 ತಿಳಿವುಗಳ ಹೋಲಿಕೆ  

ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು ಕಣ್ಣಿಗೆ ಕಾಡಿಗೆಹಚ್ಚಿಕೊಂಡು ಕಿಟಕಿಯಿಂದ ನೋಡುತ್ತಾ ನಿಂತಳು.


ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.


ಆ ದಿನದಲ್ಲಿ ಈ ಕರಾವಳಿಯಲ್ಲಿ ವಾಸಿಸುವವರು - ಹಾ, ಅಶ್ಶೂರದ ಅರಸನಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೇ ಈ ಗತಿ ಬಂತಲ್ಲಾ; ನಮ್ಮಂಥವರಿಗೆ ಹೇಗೆ ರಕ್ಷಣೆಯಾದೀತು ಎಂದು ಅಂದುಕೊಳ್ಳುವರು.


ಅವರು ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ಶಕ್ತಿಯನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುತ್ತಾರೆ.


ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅಸಹ್ಯವಾದವುಗಳಿಂದ ಅಂದರೆ ಅವಳ ಜಾರತ್ವ ಸಂಬಂಧವಾದ ಅಶುದ್ಧ ವಸ್ತುಗಳಿಂದ ತುಂಬಿತ್ತು.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.


ನಮಗೆ ಬರತಕ್ಕ ಸಹಾಯವನ್ನು ವ್ಯರ್ಥವಾಗಿ ಎದುರುನೋಡಿ ನೋಡಿ ಕಣ್ಣು ಮೊಬ್ಬಾಯಿತು. ನಮ್ಮನ್ನು ಉದ್ಧರಿಸಲಾರದ ಜನಾಂಗದ ಆಗಮನವನ್ನು ನಮ್ಮ ಕೋವರದಲ್ಲಿ ಕಾದುಕೊಂಡಿದ್ದೇವಲ್ಲಾ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ, ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಚೀಯೋನಿನ ಪಾಪಿಗಳು ಹೆದರುತ್ತಾರೆ, ಆ ಭ್ರಷ್ಟರು ನಡುಕಕ್ಕೆ ಒಳಗಾಗಿ - ನಮ್ಮಲ್ಲಿ ಯಾರು ನುಂಗುವ ಕಿಚ್ಚಿನ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುತ್ತಾರೆ.


ನಿನ್ನ ಹೃದಯವು ಅವಳ ಬೆಡಗನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣು ರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಇಗೋ ವೇಶ್ಯಾವೇಷವನ್ನು ಧರಿಸಿರುವ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಳ್ಳುತ್ತಾಳೆ.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ನಿನ್ನ ವಿುಂಡರಾರೂ ನಿನ್ನನ್ನು ಹುಡುಕುವದಿಲ್ಲ, ಮರೆತುಬಿಟ್ಟರು; ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.


ನಿನ್ನ ವಿುತ್ರಮಂಡಲಿಯವರೆಲ್ಲರು ನಿನ್ನನ್ನು ನಿನ್ನ ಎಲ್ಲೆಯ ಆಚೆಗೆ ನೂಕಿಬಿಟ್ಟಿದ್ದಾರೆ; ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ, ನಿನ್ನ ಅನ್ನ [ತಿಂದವರು] ಅವಿವೇಕಿಯಾದ ನಿನಗೆ ಉರುಲೊಡ್ಡಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು