Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 4:5 - ಕನ್ನಡ ಸತ್ಯವೇದವು J.V. (BSI)

5 ಯೆಹೂದದಲ್ಲಿ ಸಾರಿರಿ, ಯೆರೂಸಲೇವಿುನೊಳಗೆ ಪ್ರಕಟಿಸಿರಿ; ದೇಶದಲ್ಲೆಲ್ಲಾ ಕೊಂಬೂದುವಂತೆ ಅಪ್ಪಣೆಕೊಡಿರಿ; ಕೂಡಿಕೊಂಡು ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಈ ಸಂದೇಶವನ್ನು ಯೆಹೂದ ಜನರಲ್ಲಿ ಸಾರಿರಿ: ಜೆರುಸಲೇಮ್ ನಗರದ ಪ್ರತಿಯೊಬ್ಬನಿಗೂ ದೇಶದಲ್ಲೆಲ್ಲಾ ತುತ್ತೂರಿಗಳನ್ನು ಊದಿರಿ ಎಂದು ಹೇಳಿರಿ. ದೊಡ್ಡ ಧ್ವನಿಯಲ್ಲಿ ‘ಒಂದು ಕಡೆ ಸೇರೋಣ ಬನ್ನಿ, ರಕ್ಷಣೆಗಾಗಿ ಭದ್ರವಾದ ನಗರಗಳಿಗೆ ಓಡಿಹೋಗೋಣ ಬನ್ನಿ’ ಎಂದು ಕೂಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 4:5
16 ತಿಳಿವುಗಳ ಹೋಲಿಕೆ  

[ಆ ಕಾಲದಲ್ಲಿ ಜನರು ಹೀಗನ್ನುವರು - ] ಸುಮ್ಮನೆ ಕೂತಿರುವದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ; ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.


ಈ ಪ್ರಕಾರ ಯೆಹೋಶುವನೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡರು.


ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಸಿಂಹವು ಗರ್ಜಿಸಿದೆ, ಭಯಪಡದವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಸಾರದಿರುವವರು ಯಾರು?


ಊರಲ್ಲಿ ಕೊಂಬೂದಿದರೆ ಜನರು ಅಂಜರೋ? ಯೆಹೋವನಿಂದಲ್ಲದೆ ಊರಿಗೆ ವಿಪತ್ತು ಸಂಭವಿಸುವದೋ?


ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ - ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇವಿುಗೆ ಹೋಗೋಣ ಬನ್ನಿ ಅಂದುಕೊಂಡು ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದೇವೆ ಎಂದು ಹೇಳಿದರು.


ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಸಾರಿರಿ -


ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?


ಯಾಕೋಬ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ -


ನೀನು ಎರಡನ್ನೂ ಊದಿಸುವಾಗ ಜನಸಮೂಹದರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಲಿಗೆ ಕೂಡಿಬರಬೇಕು.


ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರೂ ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ನೀನು ಬೆಳ್ಳಿಯ ತಗಡಿನಿಂದ ಎರಡು ತುತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಕರಿಸುವದಕ್ಕೂ ದಂಡುಗಳನ್ನು ಹೊರಡಿಸುವದಕ್ಕೂ ಅವುಗಳನ್ನು ಉಪಯೋಗಿಸಬೇಕು.


ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು; ಬೆಳಬೆಳಗೂ ಹಗಲುರಾತ್ರಿಯೂ ಅದು ಹಾದುಹೋಗುವದು; ಆಗ ಯೆಹೋವನ ಮಾತನ್ನು ಗ್ರಹಿಸಿಕೊಳ್ಳುವದು ಬರೀ ಭಯವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು