Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 40:10 - ಕನ್ನಡ ಸತ್ಯವೇದವು J.V. (BSI)

10 ನಾನಂತು ವಿುಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಸ್ವತಃ ಮಿಚ್ಫದಲ್ಲಿ ವಾಸಮಾಡುತ್ತೇವೆ. ಇಲ್ಲಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪರವಾಗಿ ಮಾತನಾಡುತ್ತೇನೆ. ಆ ಕೆಲಸವನ್ನು ನೀವು ನನಗೆ ಬಿಟ್ಟುಬಿಡಿ. ನೀವು ದ್ರಾಕ್ಷಾರಸ, ಹಣ್ಣು ಮತ್ತು ಎಣ್ಣೆ ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದುಕೊಂಡ ಪಟ್ಟಣಗಳಲ್ಲಿ ವಾಸಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 40:10
15 ತಿಳಿವುಗಳ ಹೋಲಿಕೆ  

ತಾವು ಅಟ್ಟಲ್ಪಟ್ಟು ಸೇರಿದ್ದ ಎಲ್ಲಾ ಸ್ಥಳಗಳಿಂದಲೂ ಯೆಹೂದಕ್ಕೆ ಹಿಂದಿರುಗಿ ವಿುಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಸಮೃದ್ಧಿಯಾಗಿ ಸಂಗ್ರಹಿಸಿದರು.


ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿವಿುತ್ತ ಅಳುವದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲ ಮೇಲೆಯೂ ದ್ರಾಕ್ಷೆಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ.


ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲತೋಟಗಳನ್ನು ಕೊಟ್ಟನು.


ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ.


ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿವಿುತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ, ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು; ನಿಮ್ಮ ಹಣ್ಣಿನ ಮೇಲೆಯೂ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುತ್ತಾರೆ;


ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿ ಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ ನೂರು ಒಣಗಿದ ದ್ರಾಕ್ಷೇ ಗೊಂಚಲುಗಳನ್ನೂ ನೂರು ಹಣ್ಣುಗಳನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.


ಆದರೆ ನಿನ್ನ ಶಿಷ್ಯನಾದ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲ್ಯರಿಗೆ ಆ ದೇಶವನ್ನು ಸ್ವಾಧೀನಪಡಿಸುವನು; ಆದದರಿಂದ ಅವನನ್ನು ಧೈರ್ಯಗೊಳಿಸು.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಅಯ್ಯೋ, ನನ್ನ ಗತಿಯನ್ನು ಏನೆಂದು ಹೇಳಲಿ! ಮಾಗಿದ ಹಣ್ಣನ್ನು ಕೊಯ್ದು ದ್ರಾಕ್ಷೆಯ ಹಕ್ಕಲನ್ನು ಆಯ್ದ [ತೋಟದ] ಸ್ಥಿತಿಗೆ ಬಂದಿದ್ದೇನೆ; ತಿನ್ನುವದಕ್ಕೆ ಗೊಂಚಲೇ ಇಲ್ಲ, ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.


ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ವಿುಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯೆ ಅವನ ಸಂಗಡ ವಾಸಿಸಿದನು.


ತನ್ನ ಕೆಲಸದಲ್ಲಿ ಚಟುವಟಿಕೆಯಾಗಿರುವವನನ್ನು ನೋಡು; ಇಂಥವನು ರಾಜರನ್ನು ಸೇವಿಸುವನಲ್ಲದೆ ನೀಚರನ್ನು ಸೇವಿಸುವದಿಲ್ಲ.


ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.


ನಿನ್ನ ಪ್ರಜೆಗಳೂ ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರೂ ಧನ್ಯರು.


ಹುಲ್ಲನ್ನು [ಕೊಯ್ದು] ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವದು; ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ ಜನಶೇಷದವರು, ಪ್ರವಾದಿಯಾದ ಯೆರೆಮೀಯನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು