Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 41:5 - ಕನ್ನಡ ಸತ್ಯವೇದವು J.V. (BSI)

5 ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 41:5
28 ತಿಳಿವುಗಳ ಹೋಲಿಕೆ  

ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂವಿುಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯವೆಂಬ ಹೆಸರಿಟ್ಟನು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ದೇಶವೆಲ್ಲಾ ವಶವಾದ ಮೇಲೆ ಇಸ್ರಾಯೇಲ್ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ರೆಹಬ್ಬಾಮನು ಶೆಕೆವಿುಗೆ ಹೋದನು; ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿ ಬಂದಿದ್ದರು.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆವಿುಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನಂದರೆ -


ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್‍ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಯೆಹೂದ್ಯರ ಅರಸನಾದ ಆಸನ ಆಳಿಕೆಯ ಮೂವತ್ತೆಂಟನೆಯ ವರುಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರುಷ ಆಳಿದನು.


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;


ಪ್ರತಿವರ್ಷವೂ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಎಲ್ಕಾನನು ಹಾಗೆಯೇ ಮಾಡುತ್ತಿದ್ದದರಿಂದಲೂ ಪೆನಿನ್ನಳು ಆಕೆಯನ್ನು ರೇಗಿಸುತ್ತಿದ್ದದರಿಂದಲೂ ಹನ್ನಳು ಒಂದಾನೊಂದು ಸಾರಿ ಉಣ್ಣಲೊಲ್ಲದೆ ಅಳುತ್ತಾ ಇದ್ದಳು.


ಈ ಕೃತ್ಯಗಳನ್ನೆಲ್ಲಾ ನಡಿಸಿದ ಕಾರಣ ನನ್ನ ನಾಮಕ್ಕೆ ನೆಲೆಯಾಗಿ ನಿಮ್ಮ ಭರವಸಕ್ಕೆ ಆಧಾರವಾದ ಆಲಯಕ್ಕೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು.


ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲ್ಯರ ಅಧರ್ಮದ ನಿವಿುತ್ತ ನಾನು ಅದಕ್ಕೆ ತಂದ ಗತಿಯನ್ನು ನೋಡಿರಿ.


ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ನಿಲುವಂಗಿಗಳನ್ನು ಕುಂಡಿಯಿಂದ ಕೆಳಗಿನ ಭಾಗವನ್ನೆಲ್ಲಾ ಕತ್ತರಿಸಿ ಕಳುಹಿಸಿಬಿಟ್ಟನು.


ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವಾಸ್ತ್ಯವಾಯಿತು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಮಾನಭಂಗ ಪಡಿಸಿದನು.


ಒಂದಾನೊಂದು ಕಾಲದಲ್ಲಿ ಅವನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಶೆಕೆವಿುನಲ್ಲಿ ಮೇಯಿಸುವದಕ್ಕೆ ಹೋಗಿದ್ದಾಗ ಇಸ್ರಾಯೇಲನು


ಶೀಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ತಾನು ಜನಮಧ್ಯದಲ್ಲಿ ವಾಸಿಸುವದಕ್ಕೋಸ್ಕರ ಸಿಲೋವಿನಲ್ಲಿ ಹಾಕಿಸಿದ ಗುಡಾರವನ್ನು ತ್ಯಜಿಸಿಬಿಟ್ಟು


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ಅವನು ಗೆದಲ್ಯನನ್ನು ಕೊಂದ ಎರಡನೆಯ ದಿನದಲ್ಲಿ ಆ ಸಂಗತಿಯು ಇನ್ನೂ ಯಾರಿಗೂ ತಿಳಿಯದಿರಲು


ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶನಹೊಂದಿದೆ ಫಿಲಿಷ್ಟಿಯದ ಬೈಲುಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು