Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 42:21 - ಕನ್ನಡ ಸತ್ಯವೇದವು J.V. (BSI)

21 ನಾನು ಯೆಹೋವನ ಅಪ್ಪಣೆಯನ್ನು ಈ ದಿವಸ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇಂದು, ನಾನು ನಿಮಗೆ ಯೆಹೋವನ ಸಂದೇಶವನ್ನು ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ. ನನ್ನ ಮೂಲಕ ಆತನು ನಿಮಗೆ ಹೇಳಿದ ಯಾವ ಮಾತನ್ನೂ ನೀವು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 42:21
16 ತಿಳಿವುಗಳ ಹೋಲಿಕೆ  

ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿ ಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿಬಿಟ್ಟ ಮೇಲೆ


ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ ಸಮಸ್ತ ಸೇನಾಪತಿಗಳೂ ಸಕಲಜನರೂ ಕೇಳದೆ ಹೋದರು.


ನೋಡಿರಿ; ನಾನು ಜೀವಶುಭಗಳನ್ನೂ ಮರಣಾಶುಭಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;


ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು.


ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತಕ್ಕೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ ಆದರೆ ಕೈಕೊಳ್ಳುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು