Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:14 - ಕನ್ನಡ ಸತ್ಯವೇದವು J.V. (BSI)

14 ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದಜನಶೇಷದವರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವದಿಲ್ಲ; ಓಡಿಬರುವ ಕೊಂಚ ಜನವೇ ಹೊರತು ಯಾವನೂ ಹಿಂದಿರುಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:14
16 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ.


ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವದು; ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವರು; ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಎಲೈ ಮನುಷ್ಯನೇ, ಅಂಥವುಗಳನ್ನು ನಡಿಸುವವರಲ್ಲಿ ದೋಷವೆಣಿಸಿ ಅವುಗಳನ್ನೇ ಮಾಡುತ್ತಿರುವ ನೀನು ದೇವರ ದಂಡನೆಯ ತೀರ್ಪಿಗೆ ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯಾ?


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ನೀವು ಯಾವ ಸ್ಥಳದಲ್ಲಿ ವಾಸಮಾಡಲಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತ ತಿಳಿಯಿರಿ.


ಸತ್ತವನಿಗಾಗಿ ಅಳಬೇಡಿರಿ, ಬಡುಕೊಳ್ಳಬೇಡಿರಿ; ಸೆರೆಯಾದವನಿಗೇ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂವಿುಯನ್ನು ನೋಡನು.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ - ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನಿರನು ಎಂಬದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು