Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 44:17 - ಕನ್ನಡ ಸತ್ಯವೇದವು J.V. (BSI)

17 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 44:17
32 ತಿಳಿವುಗಳ ಹೋಲಿಕೆ  

ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ನಮ್ಮ ಅರಸರೂ ಪ್ರಭುಗಳೂ ಯಾಜಕರೂ ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ; ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಲಕ್ಷಿಸಲಿಲ್ಲ.


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.


ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವೆವು ಎಂದು ನಾವು ಮಾಡಿಕೊಂಡ ಹರಕೆಗಳನ್ನು ಖಂಡಿತವಾಗಿ ತೀರಿಸುವೆವು ಎಂಬದಾಗಿ ನೀವೂ ನಿಮ್ಮ ಹೆಂಡಿರೂ ಬಾಯಿಂದ ಪ್ರತಿಜ್ಞೆಮಾಡಿ ಕೈಯಿಂದ ನೆರವೇರಿಸಿದ್ದೀರಲ್ಲಾ; ನಿಮ್ಮ ಹರಕೆಗಳನ್ನು ತೀರಿಸೇ ತೀರಿಸಿರಿ, ನೆರವೇರಿಸೇ ನೆರವೇರಿಸಿರಿ!


ನೀವು, ನಿಮ್ಮ ಪಿತೃಗಳು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು;


ಆಕೆಯು ಅವನಿಗೆ - ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆ ಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು ಅಂದಳು.


ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುವವು. ಗಂಡನು ರದ್ದುಮಾಡಿದ್ದರಿಂದ ಅಂಥವಳು ಯೆಹೋವನಿಂದ ದೋಷಿಯೆಂದು ಎಣಿಸಲ್ಪಡುವದಿಲ್ಲ.


ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ,


ಅದಕ್ಕೆ ಅರಸನು ಬಹು ದುಃಖಪಟ್ಟರೂ ತಾನು ಇಟ್ಟುಕೊಂಡ ಆಣೆಗಳ ನಿವಿುತ್ತವಾಗಿಯೂ ತನ್ನ ಪಂಙ್ತಿಯಲ್ಲಿ ಕೂತಿದ್ದವರ ನಿವಿುತ್ತವಾಗಿಯೂ ಅವಳನ್ನು ಅಸಡ್ಡೆ ಮಾಡುವದಕ್ಕೆ ಮನಸ್ಸಿಲ್ಲದೆ


ನಿಮ್ಮ ಪಿತೃಗಳು, ಯೆಹೂದದ ಅರಸರು, ಅವರ ಹೆಂಡಿರು, ನೀವು, ನಿಮ್ಮ ಹೆಂಡಿರು, ಇವರೆಲ್ಲರೂ ಯೆಹೂದದೇಶದಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ನಡಿಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?


ಅದರಿಂದಲೇ ಈ ಕಾರ್ಯಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ಬೊಂಬೆ, ಎರಕದ ಪುತ್ತಳಿ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು, ನಡೆಯುವದಕ್ಕೆ ಮುಂಚೆಯೇ ಪ್ರಕಟಿಸಿದೆನು.


ನಮ್ಮ ಪಿತೃಗಳಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡಿಸಿದೆವು.


ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ.


ಯಾವನಾದರೂ ಯೆಹೋವನಿಗೆ ಹರಕೆಮಾಡಿದರೆ ಇಲ್ಲವೆ ತಾನು ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.


ಹೇಗಂದರೆ - ಅರಾಮ್‍ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿದವಲ್ಲಾ; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವದು ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸುವವನಾದನು. ಆ ದೇವತೆಗಳ ದೆಸೆಯಿಂದ ಅವನಿಗೂ ಎಲ್ಲಾ ಇಸ್ರಾಯೇಲ್ಯರಿಗೂ ಕೇಡುಂಟಾಯಿತು.


ನನ್ನ ಜನರು ನನ್ನನ್ನು ಬಿಟ್ಟದ್ದು, ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದ್ದಕ್ಕೆ ಅಡ್ಡಬಿದ್ದದ್ದು, ಈ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಆಗ ಯೆಹೂದದ ಪಟ್ಟಣಗಳವರೂ ಯೆರೂಸಲೇವಿುನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವದಿಲ್ಲ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ ಸರಿಯಲ್ಲದ ಸೀಳುದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರತಂದನು; ಆಹಾ, ಯೆಹೋವನ ಗುಡಿಯ ಬಾಗಿಲ ಮುಂದೆ ಮಂಟಪಕ್ಕೂ ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಗುಡಿಗೆ ಬೆನ್ನುಮಾಡಿ ಮೂಡಲಮುಖವಾಗಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು .


ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.


ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿದ್ದಿ; ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿದ್ದಿ.


ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.


ಇವರು ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಮಾಡುವದನ್ನು ನೀನು ನೋಡಲಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು